ಶಂಕರಪುರ ದ್ವಾರಕಾಮಾಯಿ ಮಠದ ಶ್ರೀ ಸಾಯಿ ಈಶ್ವರ್ ಗುರೂಜಿಯವರ ಮಹಾ ಸಂಕಲ್ಪದಂತೆ 108 ದಿನ 108 ಕ್ಷೇತ್ರ ಪ್ರದಕ್ಷಿಣೆಯ 72ನೇ ದಿನದ ಪ್ರದಕ್ಷಿಣೆಗೆ ದಿನಾಂಕ: 24-08-2024 ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀ ಶಿವನಂದ ಶಾನ್ಬೋಗ್ ರವರಿಗೆ ಧರ್ಮ, ರಾಷ್ಟ್ರ, ಯೋಧರು ಹಾಗೂ ಅವರ ಕುಟುಂಬದ ರಕ್ಷಣೆ , ಗೋರಕ್ಷಣೆ, ಸನಾತನ ಧರ್ಮ ರಕ್ಷಣೆ ಮತ್ತು ಹಿಂದೂಗಳು ಮತಾಂತರವಾಗುವುದನ್ನು ತಡೆಯುವ ನಿಟ್ಟಿನಲ್ಲಿ ಶ್ರೀ ಕ್ಷೇತ್ರದಲ್ಲಿ ನಿತ್ಯ ಪೂಜೆಯ ಬಳಿಕ ವಿಶೇಷ ಪ್ರಾರ್ಥನೆ ಮಾಡುವಂತೆ ಮನವಿ ಸಲ್ಲಿಸಿ ಬಿಲ್ವಾ ಪತ್ರೆಯ ಗಿಡ ನೀಡಿ ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮುಖ್ಯಸ್ಥರಾದ ಶಶಿಂಧ್ರ.ಎಮ್ , ಟ್ರಸ್ಟಿ ಶ್ರೀ ವಿದ್ಯಾ ಶಂಕರ್ , ಹಳೆಯಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪೂರ್ಣಿಮಾ,ಪಂಚಾಯತ್ ಸದಸ್ಯರಾದ ಸುಕೇಶ್ , ಅಶ್ವಿನ್, ಸುನೀಲ್ ಕುಮಾರ್ ,ಗೀತಾಂಜಲಿ ಎಮ್.ಸುವರ್ಣ , ವೀಣಾ ಎಸ್.ಶೆಟ್ಟಿ , ಶಿಲ್ಪಾ ಮಹೇಶ್ ಜತನ್ , ಲಕ್ಷ್ಮೀ , ಸತೀಶ್ ದೇವಾಡಿಗ, ಶಶಾಂಕ್, ಅಂಕಿತ್ ಹಾಗೂ ಉಪಸ್ಥಿತರಿದ್ದರು.