110ನೇ ವರ್ಷದ ಮೊಸರು ಕುಡಿಕೆ ಮಹೋತ್ಸವಕ್ಕೆ ಚಾಲನೆ : ಬೆದ್ರದ ಕೃಷ್ಣೋತ್ಸವದ ಪೋಸ್ಟರ್ ಅನಾವರಣ

0
8

ಮೂಡುಬಿದಿರೆ : ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಇತಿಹಾಸ ಪ್ರಸಿದ್ದ 110ನೇ ವರ್ಷದ ಮೊಸರು ಕುಡಿಕೆ ಕಾರ್ಯಕ್ರಮದ ಪ್ರಯುಕ್ತ ಜವನೆರ್ ಬೆದ್ರ ಫೌಂಡೇಶನ್(ರಿ.) ಸಂಘಟನೆ ಆಯೋಜಿಸುವ ಬೆದ್ರದ ಕೃಷ್ಣೋತ್ಸವ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ ಕಾರ್ಯಕ್ರಮವೂ ಇಂದು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ನಡೆಯಿತು.

ಶ್ರೀ ಗೋಪಾಲಕೃಷ್ಣ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಮುಂದಿನ ದಿನಗಳಲ್ಲಿ ನಡೆಯುವ ಕಾರ್ಯಕ್ರಮಗಳು ಸುಸುತ್ರವಾಗಿ ನಡೆಯಲು ಪ್ರಾರ್ಥಿಸಿ, ದೇವರಿಗೆ ಫಲಪುಷ್ಪವನ್ನು ಅರ್ಪಿಸಿದ ಬಳಿಕ ಪೋಸ್ಟರ್ ಬಿಡುಗಡೆ ಕಾರ್ಯಕ್ರಮವೂ ನಡೆಯಿತು. ಪೋಸ್ಟರ್ ಬಿಡುಗಡೆ ಸಂಧರ್ಭದಲ್ಲಿ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೋಕ್ತೆಸರರಾದ ಗುರುಪ್ರಸಾದ್ ಹೊಳ್ಳ, ಜವನೆರ್ ಬೆದ್ರ ಫೌಂಡೇಶನ್(ರಿ.) ಸಂಸ್ಥಾಪಕ ಅಮರ್ ಕೋಟೆ, ಸಂಘಟನೆಯ ಸಂಚಾಲಕರಾದ ರಂಜಿತ್ ಶೆಟ್ಟಿ, ಅಬ್ಬಕ್ಕ ಬ್ರಿಗೇಡ್’ನ ಸಂಚಾಲಕರಾದ ಸುನೀತ ಉದಯ್ ಹಾಗೂ ದಿನೇಶ್ ನಾಯ್ಕ್, ನಾರಯಣ ಪದುಮಲೆ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here