ರಸ್ತೆ ದಾಟುತ್ತಿದ್ದಾಗ ಕೆ.ಕೆ.ಆರ್.ಟಿ.ಸಿ ಬಸ್ಸಿಗೆ ಸಿಲುಕಿ ನಾಲ್ಕು ವರ್ಷದ ಮಗು ಸ್ಥಳದಲ್ಲೆ ಮೃತಪಟ್ಟ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಮದರಕಲ್ ಗ್ರಾಮದ ಬಳಿ ಸಂಭವಿಸಿದೆ.
ನಾಲ್ಕು ವರ್ಷದ ಮಗುವಿನ ಮೇಲೆ ಕೆ.ಕೆ.ಆರ್.ಟಿ.ಸಿ ಬಸ್ ಹರಿದು ಹೋಗಿದ್ದು, ಕಂದಮ್ಮ ಸ್ಥಳದಲ್ಲೇ ಸಾವನ್ನಪ್ಪಿದೆ. ನಾಲ್ಕು ವರ್ಷದ ವಿದ್ಯಾಶ್ರೀ ಮೃತ ಮಗು. ಬಸ್ ಗೆ ಬಾಲಕಿ ಅಚಾನಕ್ ಆಗಿ ರಸ್ತೆಯಲ್ಲಿ ಅಡ್ಡ ಬಂದಿದ್ದಾಳೆ. ಬಸ್ ಮಗುವಿನ ಮೇಲೆಯೇ ಹರಿದು ಹೋಗಿದ್ದು, ಸ್ಥಳದಲ್ಲೇ ಬಾಲಕಿ ಸಾವನ್ನಪ್ಪಿದ್ದಾಳೆ. ಗಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

