ವಾರಾಣಸಿ : ಉತ್ತರ ಪ್ರದೇಶ ಮುಖ್ಯಮಂತ್ರಿ Yogi Adityanath ಅವರ 54ನೇ ಜನ್ಮದಿನದ ಅಂಗವಾಗಿ ವಾರಾಣಸಿಯಲ್ಲಿ ಬೆಂಬಲಿಗರು ಹಾಗೂ ಅಭಿಮಾನಿಗಳು ವಿಶೇಷ ರೀತಿಯಲ್ಲಿ ಸಂಭ್ರಮಾಚರಣೆ ನಡೆಸಿದರು.

ಮುಖ್ಯಮಂತ್ರಿಗಳ ವಯಸ್ಸನ್ನು ಪ್ರತಿಬಿಂಬಿಸುವಂತೆ 54 ಕೆಜಿಯ ವಿಶೇಷ ಲಡ್ಡು ಕೇಕ್ ಸಿದ್ಧಪಡಿಸಲಾಗಿದ್ದು, ಅದನ್ನು ಕತ್ತರಿಸುವ ಮೂಲಕ ಜನ್ಮದಿನವನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಈ ವಿಶಿಷ್ಟ ಆಚರಣೆ ಸ್ಥಳೀಯರ ಗಮನ ಸೆಳೆಯಿತು.
ಇದೇ ಸಂದರ್ಭದಲ್ಲಿ ಪರಿಸರ ಸಂರಕ್ಷಣೆಯ ಸಂದೇಶ ಸಾರುವ ಉದ್ದೇಶದಿಂದ ಸಂಘಟಕರು ಹಾಗೂ ಬೆಂಬಲಿಗರು ಸೇರಿ 54 ಸಸಿಗಳನ್ನು ನೆಟ್ಟು ಪರಿಸರ ಜಾಗೃತಿ ಮೂಡಿಸಿದರು. ಹುಟ್ಟುಹಬ್ಬದ ಸಂಭ್ರಮವನ್ನು ಸಮಾಜಮುಖಿ ಕಾರ್ಯದೊಂದಿಗೆ ಸಂಯೋಜಿಸಿರುವುದು ವಿಶೇಷವಾಗಿತ್ತು.
ಯೋಗಿ ಆದಿತ್ಯನಾಥ್ ಅವರ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಹಾಗೂ ಯಶಸ್ಸಿಗಾಗಿ ಅಭಿಮಾನಿಗಳು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಪರಸ್ಪರ ಸಿಹಿ ಹಂಚಿಕೊಂಡು ಸಂಭ್ರಮವನ್ನು ಹಂಚಿಕೊಂಡರು.

