ಹಳೆಯಂಗಡಿ: ಪಂಜ ಕೊಯಿಕುಡೆ ಶ್ರೀ ವಿಠೋಬ ಭಜನಾ ಮಂದಿರದ 66 ನೇ ವರ್ಷದ ಮಂಗಳೋತ್ಸವ ಶ್ರೀ ಸುರೇಶ್ ಭಟ್ ಪಂಜ ಇವರ ಮಾರ್ಗದರ್ಶನದಲ್ಲಿ ಕಾರ್ತಿಕ್ ಭಟ್ ಇವರ ಪೌರೋಹಿತ್ಯದಲ್ಲಿ ನಡೆಯಿತು.
ಸೂರ್ಯೋದಯದಲ್ಲಿ ಭಜನಾ ಜ್ಯೋತಿ ಬೆಳಗಿಸಿ ಭಜನಾ ಸಂಕೀರ್ತನೆಗೆ ಚಾಲನೆ ನೀಡಲಾಯಿತು.ಬಳಿಕ ಸೂರ್ಯಾಸ್ತದವರೆಗೆ 14 ಭಜನಾ ತಂಡಗಳಿಂದ ಭಜನಾ ಸೇವೆ ನಡೆಯಿತು. ಭಜನಾ ಮಂದಿರದ ಕುಣಿತ ಭಜನಾ ತಂಡದ ಮಕ್ಕಳಿಂದ ಕುಣಿತ ಭಜನೆ ವಿಶೇಷವಾಗಿತ್ತು.
ಶ್ರೀ ಕ್ಷೇತ್ರಕ್ಕೆ ಶಾಸಕ ಉಮಾನಾಥ ಕೋಟ್ಯಾನ್, ಮಾಜಿ ಶಾಸಕ ಅಭಯಚಂದ್ರ ಜೈನ್ ಮತ್ತಿತರ ಗಣ್ಯರು ಭೇಟಿ ನೀಡಿ ದೇವರ ದರ್ಶನ ಮಾಡಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಂದಿರದ ಸಭಾಗೃಹ ನಿರ್ಮಾಣದ ದಾನಿ ಬೋಳ ರಘುರಾಮ ಶೆಟ್ಟಿ ದಂಪತಿಯನ್ನು ಸನ್ಮಾನಿಸಲಾಯಿತು.
ಮಧ್ಯಾಹ್ನ ಮತ್ತು ರಾತ್ರಿ ಅನ್ನಸಂತರ್ಪಣೆ ನಡೆಯಿತು.
ಸಂಜೆ ಸೂರ್ಯಾಸ್ತದಲ್ಲಿಮಂಗಳೋತ್ಸವ ನಡೆಯಿತು. ಬಳಿಕ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಿತು. ಕುಣಿತ ಭಜನೆ ಶಿಕ್ಷಕ ಶಿವರಾಮ್ ಶೆಟ್ಟಿ ದಂಪತಿ,ಯಕ್ಷ ಗುರು ರಕ್ಷಿತ್ ಶೆಟ್ಟಿ ಪಡ್ರೆ ಮತ್ತು ಶಿಷ್ಯರು, ಶ್ರೀ ವಿಠೋಬ ಭಜನಾ ಮಂದಿರದ ಅಧ್ಯಕ್ಷ ಕರುಣಾಕರ ಶೆಟ್ಟಿ, ನವಜ್ಯೋತಿ ಮಹಿಳಾ ಮಂಡಳಿ ಅಧ್ಯಕ್ಷೆ ಕುಶಲ ಶೇಖರ್, ಕೆಮ್ರಾಲ್ ಪಂಚಾಯತ್ ಸದಸ್ಯ ಸುರೇಶ್ ದೇವಾಡಿಗ, ಸಂತೋಷ್ ಪೂಜಾರಿ ಉಲ್ಯ ಇವರನ್ನು ಸನ್ಮಾನಿಸಲಾಯಿತು.
ಸತೀಶ್ ಶೆಟ್ಟಿ ಬೈಲಗುತ್ತು ಮತ್ತು ಅಮಿತಾ ದೇವಾಡಿಗ ಕಾರ್ಯಕ್ರಮ ನಿರೂಪಿಸಿದರು.
ಬಳಿಕ ಶ್ರೀ ವಿಠೋಬ ಯಕ್ಷ ನೂಪುರ ನಾಟ್ಯ ಕಲಾ ಕೇಂದ್ರದ ವಿದ್ಯಾರ್ಥಿಗಳಿಂದ “ಲೀಲಾ ಮಾನುಷ ವಿಗ್ರಹ” ಎಂಬ ಯಕ್ಷಗಾನ ಪ್ರದರ್ಶನ ನಡೆಯಿತು.
ಈ ಕಾರ್ಯಕ್ರಮದಲ್ಲಿ ಶ್ರೀ ವಿಠೋಬ ಭಜನಾ ಮಂದಿರದ ಅಧ್ಯಕ್ಷರು, ಪದಾಧಿಕಾರಿಗಳು, ಸರ್ವ ಸದಸ್ಯರು, ಮಹಿಳಾ ವಿಭಾಗದ ಸದಸ್ಯರು ಹಾಗೂ ಪಂಜ ಕೊಯಿಕುಡೆ ಗ್ರಾಮಸ್ಥರು ಭಾಗವಹಿಸಿದ್ದರು.
ಪಂಜ ಕೊಯಿಕುಡೆ ಶ್ರೀ ವಿಠೋಬ ಭಜನಾ ಮಂದಿರದಲ್ಲಿ 66 ನೇ ವರ್ಷದ ಮಂಗಳೋತ್ಸವ ಸಂಪನ್ನ: ಬೋಳ ರಘುರಾಮ ಶೆಟ್ಟಿ ದಂಪತಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ
RELATED ARTICLES