ಇಂದ್ರಾಣಿ ಶ್ರೀ ಮುಖ್ಯಪ್ರಾಣ ದೇವರ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಅಂಗವಾಗಿ ಗುರುವಾರ ಪ್ರಧಾನ ಅರ್ಚಕರಾದ ಗೋಪಾಲಕೃಷ್ಣ ಉಪಾಧ್ಯಾಯ ಬೃಹತ್ ಗಂಟೆಯಾ ಉದ್ಘಾಟನೆ ನೆರವೇರಿಸಿದರು. ಮತ್ತು ಶ್ರೀ ದೇವರ ಸನ್ನಿಧಿಯಲ್ಲಿ ಸಾಮೂಹಿಕವಾಗಿ ಹನುಮಾನ್ ಚಾಲೀಸ್ ಪಠಣ ಕೆ ಚಾಲನೆ ನೀಡಲಾಯಿತು , ಸೇರಿದ ಭಕ್ತರಿಂದ ಸಾಮೂಹಿಕ ಹನುಮಾನ್ ಚಾಲೀಸ್ ಪಠಣ ಜರಗಿತು ಬಳಿಕ ಮಕ್ಕಳಿಂದ ಹಾಗೂ ವಿವಿಧ ಭಜನಾ ತಂಡದವರಿಂದ ಭಜನಾ ಕಾರ್ಯಕ್ರಮ ಜರಗಿತು .
ಮುಖ್ಯ ಪ್ರಾಣ ದೇವರ ಸನ್ನಿಧಿಯಲ್ಲಿ ಸರೋಜಿನಿ ಜಯ ಶೆಟ್ಟಿ ಸಂಗ್ರಹಿಸಿದ ” ಕಾರ್ಣಿಕದ ಕ್ಷೇತ್ರ ಇಂದ್ರಾಣಿ ” ಪುಸ್ತಕ ವನ್ನು ಶಿವಾನಂದ ಭಾರತಿ ಸ್ವಾಮಿಜೀ ಬಿಡುಗಡೆ ಮಾಡಿ ಶುಭ ಹಾರೈಸಿದರು.
ವೇದಿಕೆಯಲ್ಲಿ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷ ಭೂಪತಿ ಶೆಟ್ಟಿ , ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಜಯಕರ್ ಶೆಟ್ಟಿ ಇಂದ್ರಾಳಿ, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕುಶಲ ಶೆಟ್ಟಿ , ಪ್ರಧಾನ ಕಾರ್ಯದರ್ಶಿ ರತ್ನಾಕರ ಇಂದ್ರಾಳಿ , ಯೋಗೀಶ ಭಟ್, ವಿವಿಧ ಸಮಿತಿಯ ಪಧಾದಿಕಾರಿಗಳು, ನೂರಾರು ಭಕ್ತರೊ ಉಪಸ್ಥರಿದ್ದರು.

