ಶೀರೂರು ಮಠ, ಉಡುಪಿ : ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯದ ಸಂದರ್ಭದಲ್ಲಿ ಕರ್ನಾಟಕದ ಅರಣ್ಯ ಪರಿಸರ ಮತ್ತು ಪರಿಸರ ಸಚಿವರಾದ ಈಶ್ವರ್ ಖಂಡ್ರೆ ಇವರು ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದರು .
ಈ ಸಂದರ್ಭದಲ್ಲಿ ಶೀರೂರು ಮಠದ ದಿವಾನರಾದ ಉದಯಕುಮಾರ್ ಸರಳತ್ತಾಯ ಇವರು ಶ್ರೀ ಕೃಷ್ಣ ಮಠದ ವತಿಯಿಂದ ಗೌರವಿಸಿದರು.
ಈ ಸಂದರ್ಭದಲ್ಲಿ ಶೀರೂರು ಮಠದ ಪಾರುಪತ್ಯೆಗಾರರಾದ ಶ್ರೀಶ ಭಟ್ ಕಡೇಕಾರು ಹಾಗೂ ಪ್ರಸಾದ್ ರಾಜ್ ಕಾಂಚನ್ ಉದ್ಯಮಿಗಳು ಹಾಗೂ ಕಾಂಗ್ರೆಸ್ ಮುಖಂಡರು ಉಡುಪಿ ವಿಧಾನಸಭಾ ಕ್ಷೇತ್ರ ಉಪಸ್ಥಿತರಿದ್ದರು.

