ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ರವರು, ಸದರಿ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಘಟನೆಗೆ ನಿಖರವಾದ ಕಾರಣಗಳ ಕುರಿತು ರಾಜ್ಯಮಟ್ಟದ ಉನ್ನತ ಅಧಿಕಾರಿಗಳ ಜೊತೆ ಚರ್ಚಿಸಿರುತ್ತಾರೆ ಹಾಗೂ ರಾಜ್ಯಮಟ್ಟದ ಉನ್ನತ ಅಧಿಕಾರಿಗಳ ತನಿಖಾ ತಂಡ ರಚಿಸಿ, ಕೂಲಂಕುಶವಾಗಿ ತನಿಖೆ ನಡೆಸಲು ಆದೇಶಿಸಿರುತ್ತಾರೆ.
ಇದರ ಜೊತೆಗೆ, ಸ್ಥಳೀಯ ಮಟ್ಟದಲ್ಲಿಯೂ ಸಹ ಜಿಲ್ಲಾಧಿಕಾರಿಗಳ (DC) ನೇತೃತ್ವದಲ್ಲಿ ಪ್ರತ್ಯೇಕ ತನಿಖೆ ನಡೆಯಲಿದ್ದು, ಈ ಎರಡೂ ವರದಿಗಳು ಬಂದ ನಂತರ ಇಲಾಖೆಯು ಪರಿಶೀಲಿಸಿ ನಿಯಮಾನುಸಾರ ಕ್ರಮವಹಿಸಲಾಗುವುದು ಎಂದು ತಿಳಿಸಿದರು.
ವರದಿ ರಾಯಿ ರಾಜ ಕುಮಾರ್
