ಮೊಗ್ರು : ಮೊಗ್ರು ಗ್ರಾಮದ ಪುoಡುಪಿಲ ನಿವಾಸಿ ಪ್ರಗತಿಪರ ಕೃಷಿಕರಾದ ವಿಶ್ವನಾಥ ಗೌಡ (64 ವರ್ಷ ) ಅಲ್ಪಕಾಲದ ಅನಾರೋಗ್ಯದಿಂದ ಜುಲೈ 04 ರಂದು ಸ್ವಗೃಹದಲ್ಲಿ ನಿಧನರಾದರು.
ಮೃತರು ಪತ್ನಿ ನೀಲಮ್ಮ, ಪುತ್ರ ಬಂದಾರು ಪಂಚಾಯತ್ ಮಾಜಿ ಸದಸ್ಯರು, ಮೊಗ್ರು ಬಿಜೆಪಿ ಶಕ್ತಿ ಕೇಂದ್ರ ಪ್ರಮುಖರಾದ ಶಿವಪ್ರಸಾದ್, ಪುತ್ರಿ, ಮೊಮ್ಮಕ್ಕಳು, ಕುಟುಂಬಸ್ಥರು, ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಮೃತರ ಮನೆಗೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ, ಬಿಜೆಪಿ ಮಂಡಲ ಅಧ್ಯಕ್ಷರಾದ ಶ್ರೀನಿವಾಸ್ ರಾವ್ ಧರ್ಮಸ್ಥಳ, ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ಕಣಿಯೂರು ಬಿಜೆಪಿ ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಮುಗೇರಡ್ಕ, ಪ್ರಧಾನ ಕಾರ್ಯದರ್ಶಿ ಮಹೇಶ್ ಜೇoಕ್ಯಾರ್, ಮಂಡಲ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಜಯಪ್ರಸಾದ್ ಗೌಡ ಕಡಮ್ಮಾಜೆ ಫಾರ್ಮ್ಸ್, ಮುಗೇರಡ್ಕ ಮೂವರು ದೈವಸ್ಥಾನ ಆಡಳಿತ ಮೊಕ್ತೇಸರಾದ ಚಂದ್ರಹಾಸ ಗೌಡ ದೇವಸ್ಯ ಗುತ್ತು,ಜನಪ್ರತಿನಿದಿನಗಳು, ಹಲವಾರು ಗಣ್ಯರು ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿ.ಮನೆಯವರಿಗೆ ಸಾಂತ್ವನ ನೀಡಿದರು.

