ಡಿ.ಕೆ. ಸುರೇಶ್ ನಿವಾಸದಲ್ಲಿ ಕೋಳಿ ಸಾಕಾಣಿಕೆ ರೈತರ ಮಹತ್ವದ ಸಮಾಲೋಚನಾ ಸಭೆ

0
6

ಬೆಂಗಳೂರು: ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ.ಕೆ. ಸುರೇಶ್ ಅವರ ನಿವಾಸದಲ್ಲಿ ರಾಜ್ಯದ ವಿವಿಧ ಕೋಳಿ ಸಾಕಾಣಿಕೆ ರೈತರ ಸಂಘಟನೆಗಳ ಮುಖಂಡರೊಂದಿಗೆ ಕೋಳಿ ಸಾಕಾಣಿಕೆ ರೈತರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳು, ಬೇಡಿಕೆಗಳು ಹಾಗೂ ಮುಂದಿನ ಹೋರಾಟದ ರೂಪುರೇಷೆಗಳ ಕುರಿತು ಮಹತ್ವದ ಸಮಾಲೋಚನಾ ಸಭೆ ನಡೆಯಿತು.

ಸಭೆಯಲ್ಲಿ ರಾಜ್ಯದ ವಿವಿಧ ಭಾಗಗಳ ಕೋಳಿ ಸಾಕಾಣಿಕೆ ರೈತರ ಸಂಘಟನೆಗಳ ಮುಖಂಡರು ಭಾಗವಹಿಸಿ, ರೈತರು ಎದುರಿಸುತ್ತಿರುವ ಸಮಸ್ಯೆಗಳು, ಸಾಕಾಣಿಕೆ ವೆಚ್ಚ, ರೈತರ ಹಿತಾಸಕ್ತಿಗಳ ರಕ್ಷಣೆ ಹಾಗೂ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಕಾರ್ಯಚಟುವಟಿಕೆಗಳ ಕುರಿತು ಸಮಾಲೋಚನೆ ನಡೆಸಿದರು.

ತುಳುನಾಡು ಭಾಗದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಕೋಳಿ ಸಾಕಾಣಿಕೆ ರೈತರ ಪರವಾಗಿ ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟ(ರಿ.) ದಕ್ಷಿಣ ಕನ್ನಡ / ಉಡುಪಿ ಜಿಲ್ಲಾ ಕೇಂದ್ರ ಸಮಿತಿ ಅಧ್ಯಕ್ಷರಾದ ಶ್ರೀ ಸಯ್ಯದ್ ಹಸನ್ ಅವರು ಸಭೆಯಲ್ಲಿ ಭಾಗವಹಿಸಿದರು.

ಈ ಸಂದರ್ಭದಲ್ಲಿ ಅವರು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಕೋಳಿ ಸಾಕಾಣಿಕೆ ರೈತರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳು, ಪ್ರಮುಖ ಬೇಡಿಕೆಗಳು ಹಾಗೂ ಮುಂದಿನ ಹೋರಾಟದ ಕುರಿತು ತಮ್ಮ ಅಭಿಪ್ರಾಯಗಳನ್ನು ಮಂಡಿಸಿದರು.

ರಾಜ್ಯದ ಕೋಳಿ ಸಾಕಾಣಿಕೆ ರೈತರ ಹಿತಾಸಕ್ತಿಗಾಗಿ ವಿವಿಧ ಸಂಘಟನೆಗಳು ಒಗ್ಗೂಡಿ ಕಾರ್ಯನಿರ್ವಹಿಸುವ ಅಗತ್ಯದ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ರೈತರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸಂಘಟನೆಗಳ ನಡುವೆ ಸಮನ್ವಯ ಸಾಧಿಸಿ, ಮುಂದಿನ ದಿನಗಳಲ್ಲಿ ಒಗ್ಗಟ್ಟಿನ ಕಾರ್ಯಯೋಜನೆ ರೂಪಿಸುವ ಕುರಿತು ಮುಖಂಡರು ಸಮಾಲೋಚನೆ ನಡೆಸಿದರು.

ರೈತರ ಹಕ್ಕುಗಳು ಹಾಗೂ ಹಿತಾಸಕ್ತಿಗಳ ರಕ್ಷಣೆಗೆ ಮುಂದಿನ ದಿನಗಳಲ್ಲಿ ಸಂಘಟಿತವಾಗಿ ಕೈಗೊಳ್ಳಬೇಕಾದ ಕಾರ್ಯಚಟುವಟಿಕೆಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು.