ದೆಹಲಿಯಿಂದ ಬೆಂಗಳೂರಿಗೆ ತೆರಳುವ ಕೆಕೆ ಎಕ್ಸ್​ಪ್ರೆಸ್ ರೈಲಿಗೆ ಹುಸಿ ಬಾಂಬ್​ ಬೆದರಿಕೆ ಕರೆ: ಓರ್ವ ವ್ಯಕ್ತಿ ಅರೆಸ್ಟ್​

0
225

ಬೆಂಗಳೂರು: ದೆಹಲಿಯಿಂದ ಬೆಂಗಳೂರಿಗೆ ತೆರಳುವ ಕೆಕೆ ಎಕ್ಸ್​ಪ್ರೆಸ್ ರೈಲಿಗೆ ಓರ್ವ ವ್ಯಕ್ತಿಯಿಂದ ಹುಸಿ ಬಾಂಬ್​ ಬೆದರಿಕೆ ಕರೆ  ಮಾಡಲಾಗಿದೆ. ಮಧ್ಯರಾತ್ರಿ ಒಂದು ಗಂಟೆ ಸುಮಾರಿಗೆ ಹುಸಿ ಬಾಂಬ್ ಕರೆ ಬಂದ ಕೂಡಲೇ ವಾಡಿ ಜಂಕ್ಷನ್ ಬಳಿ ರೈಲ್ವೆ ಪೊಲೀಸರಿಂದ ತೀವ್ರ ತಪಾಸಣೆ ಮಾಡಲಾಗಿದೆ. ಬಳಿಕ ಹುಸಿಬಾಂಬ್ ಕರೆ ಅನ್ನೋದನ್ನು ಅಧಿಕಾರಿಗಳು ದೃಢಪಡಿಸಿದ್ದಾರೆ. ಹುಸಿಬಾಂಬ್ ಕರೆ ಮಾಡಿದ ಆರೋಪಿ ದೀಪಕ್​ ಸಿಂಗ್​ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸಿದ್ದಾರೆ.

ಬಂಧಿತ ವ್ಯಕ್ತಿ ಉತ್ತರ ಪ್ರದೇಶ ಮೂಲದ ದೀಪ್ ಸಿಂಗ್ ರಾಥೋಡ್ (33) ಎಂದು ಗುರುತಿಸಲಾಗಿದೆ. ದೆಹಲಿ-ಬೆಂಗಳೂರು ಮಾರ್ಗವಾಗಿ ಸಂಚರಿಸುವ ಕೆಕೆ ಎಕ್ಸ್​ಪ್ರೆಸ್​ ರೈಲಿನಲ್ಲಿ ಆತನು ಪ್ರಯಾಣಿಸುತ್ತಿದ್ದ. ಈ ವೇಳೆ ಭಾನುವಾರ ಬೆಳಿಗ್ಗೆ ರೈಲ್ವೆ ನಿಯಂತ್ರಣ ಕೊಠಡಿಗೆ ರೈಲಿನಲ್ಲಿ ಬಾಂಬ್​ ಇಡಲಾಗಿದೆ ಎಂದು ಬೆದರಿಕೆ ಕರೆ ಮಾಡುವ ಮೂಲಕ ಭಾರಿ ಭದ್ರತಾ ಭೀತಿಯನ್ನುಂಟುಮಾಡಿದ್ದಾನೆ. ಈ ಹಿನ್ನೆಲೆ ಪೊಲೀಸ್​ ಅಧಿಕಾರಿಗಳು ರೈಲನ್ನು ವಾಡಿ ರೈಲ್ವೆ ನಿಲ್ದಾಣದಲ್ಲಿ ನಿಲ್ಲಿಸಿ, ನಾಲ್ಕು ಗಂಟೆಗಳ ಕಾಲ ಸಂಪೂರ್ಣ ಭದ್ರತಾ ತಪಾಸಣೆ ಮಾಡಿದ್ದಾರೆ.

ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನ ದಳ ಸ್ಥಳಕ್ಕೆ ದೌಡಾಸಿದ್ದು, ರೈಲಿನ ಎಲ್ಲಾ 22 ಬೋಗಿಗಳನ್ನು ಪರಿಶೀಲಿಸಲಾಯಿತು. ಈ ತಪಾಸಣೆ ವೇಳೆ ಪ್ರಯಾಣಿಕರನ್ನು ಕೆಳಗಿಳಿಸಲಾಗಿತ್ತು. ಈ ವೇಳೆ ಯಾವುದೇ ಸ್ಫೋಟಕಗಳು ಕಂಡುಬಂದಿಲ್ಲ ಮತ್ತು ಇದೊಂದು ಹುಸಿ ಬಾಂಬ್ ಕರೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ.

ಸದ್ಯ ವಾಡಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದೀಪ್ ಸಿಂಗ್ ರಾಥೋಡ್​​ ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪಿಎಸ್ಐ ವೀರಭದ್ರಪ್ಪ ಹೆಚ್​​ಎಸ್​ ಹೇಳಿದ್ದಾರೆ.

LEAVE A REPLY

Please enter your comment!
Please enter your name here