ಮೂಡುಬಿದಿರೆ: ಮಾಸ್ತಿಕಟ್ಟೆ-ಇರುವೈಲು ರಸ್ತೆಯ ಹೊಸಬೆಟ್ಟು ಚರ್ಚ್ ಬಳಿ ಚಿರತೆ ಕಂಡು ಬಂದಿದ್ದು, ಸ್ಥಳೀಯರು ಆತಂಕಗೊಂಡಿದ್ದಾರೆ. ಚಿರತೆ ರಸ್ತೆಯಲ್ಲಿ ನಡೆದುಕೊಂಡು ಹೋಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಅರಣ್ಯ ಇಲಾಖೆಯು ಚಿರತೆ ಹಿಡಿಯಲು ಬೋನ್ ಅಳವಡಿಸಬೇಕೆಂಬ ಆಗ್ರಹ ಗ್ರಾಮಸ್ಥರಿಂದ ಕೇಳಿ ಬಂದಿದೆ.