ಅಕ್ಷಯ ಯುವಕ ಮಂಡಲ ರಿ ನೆಟ್ಟಾರು ಇದರ ಆಶ್ರಯದಲ್ಲಿ ಪ್ರಾದೇಶಿಕ ಅರಣ್ಯ ವಲಯ ಪುತ್ತೂರು ಸಹಭಾಗಿತ್ವದಲ್ಲಿ ಅಕ್ಷತಾ ಮಹಿಳಾ ಮಂಡಲ ಸಹಯೋಗದೊಂದಿಗೆ ನೆಟ್ಟಾರು ಪರಿಸರದಲ್ಲಿ ಗಿಡ ನೆಡುವ ಕಾರ್ಯಕ್ರಮ ಆಗಸ್ಟ್ 03ರಂದು ನಡೆಯಿತು. ಕಾರ್ಯಕ್ರಮವನ್ನು ಪ್ರಾದೇಶಿಕ ಅರಣ್ಯ ವಲಯ ಪುತ್ತೂರು ಇದರ ಬೆಳ್ಳಾರೆ ಶಾಖೆಯ ದಿಲೀಪ್ ಮುಖ್ಯ ಅತಿಥಿಗಳಾಗಿದ್ದರು. ಕಾರ್ಯಕ್ರಮದಲ್ಲಿ ಯುವಕ ಮಂಡಲದ ಅಧ್ಯಕ್ಷರಾದ ಭಾಸ್ಕರ ನೆಟ್ಟಾರು, ಮಹಿಳಾ ಮಂಡಲದ ಅಧ್ಯಕ್ಷೆ ಚಂಚಲಾಕ್ಷಿ, ಎಸ್ ಡಿ ಎಂ ಸಿ ಅಧ್ಯಕ್ಷ ವಸಂತ ನೆಟ್ಟಾರು ಹಾಗೂ ಮಹಿಳಾ, ಯುವಕ ಮಂಡಲ ಸದಸ್ಯರು ಉಪಸ್ಥಿತರಿದ್ದರು.