ವೇಣೂರು: ಯುವವಾಹಿನಿ (ರಿ.) ವೇಣೂರು ಘಟಕದ ವಾರ್ಷಿಕ ಮಹಾಸಭೆಯು ಘಟಕದ ಅಧ್ಯಕ್ಷ ಶುಭಕರ ಪೂಜಾರಿ ಸಾವ್ಯ ಇವರ ಅಧ್ಯಕ್ಷತೆಯಲ್ಲಿ ವೇಣೂರು ಲಯನ್ಸ್ ಕ್ಲಬ್ ಸಭಾಭವನದಲ್ಲಿ ನಡೆಯಿತು.
ನಿಯೋಜಿತ ಅಧ್ಯಕ್ಷರಾಗಿ ಯುವ ಉದ್ಯಮಿ ಪ್ರಕಾಶ್ ಕೋಟ್ಯಾನ್ ಡೊಂಕಬೆಟ್ಟು ನಾರಾವಿ, ಪ್ರ. ಕಾರ್ಯದರ್ಶಿಯಾಗಿ ದಕ್ಷಾ ಅಂಡಿಂಜೆ, ಕೋಶಾಧಿಕಾರಿ ಸತೀಶ್ ಚಿಗುರು , ಉಪಾಧ್ಯಕ್ಷರುಗಳಾಗಿ ಸತೀಶ್ ಉಜಿರ್ದಡ್ಡ, ಯುವನ್ಯಾಯವಾದಿ ಸತೀಶ್ ಪಿ.ಎನ್., ಜೊತೆ ಕಾರ್ಯದರ್ಶಿ ಗ್ರಾಮ ಪಂಚಾಯತ್ ಸದಸ್ಯ ಸುರೇಶ್ ಪೂಜಾರಿ ಮತ್ತು ನಿರ್ದೇಶಕರುಗಳು ಹಾಗೂ ಸಂಘಟನಾ ಕಾರ್ಯದರ್ಶಿಗಳನ್ನು ಆಯ್ಕೆ ಮಾಡಲಾಯಿತು. ಗುರುವರ್ಯರ ಪ್ರಾರ್ಥನೆಯೊಂದಿಗೆ ಅರ0ಭವಾದ ಸಭೆಯಲ್ಲಿ ಕಾರ್ಯದರ್ಶಿ ರಕ್ಷಿತ್ ಬಂಗೇರ ಸ್ವಾಗತಿಸಿದರು, ನಿಯೋಜಿತ ಕಾರ್ಯದರ್ಶಿ ದಕ್ಷಾ ವಂದಿಸಿದರು.