ಉಡುಪಿ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಘಟನೆ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಕಾರ್ಕಳ ವಲಯದ 30ನೇ ವರ್ಷದ ಸಂಭ್ರಮಾಚರಣೆಯ ಅಂಗವಾಗಿ ನಡೆದ ಛಾಯಾ ಕುಟುಂಬ ಸಮ್ಮಿಲನ -2025 ಈ ಸಂದರ್ಭದಲ್ಲಿ ಸಂಘಟನೆಯಲ್ಲಿ ಎಲ್ಲಾ ಕಾರ್ಯಕ್ರಮಗಳಲ್ಲಿ ಕೈ ಜೋಡಿಸಿ ಉತ್ಸುಕತೆಯಿಂದ ಬಾಗವಹಿಸಿ ಅದಲ್ಲದೆ ಸುಮಾರು 25ವರ್ಷಗಳಿಂದಲೂ ಹೆಚ್ಚು ಕ್ರೀಡೆಯಲ್ಲಿ ತಮ್ಮನ್ನು ತೊಡಗಿಸಿ ತಂಡವನ್ನು ಕಟ್ಟಿ ಬೆಳೆಸಿದ ರಾಜೇಶ್ ದೇವಾಡಿಗ ಅವರನ್ನು ಸನ್ಮಾನಿಸಲಾಯಿತು.
ಇವರು ಜಿಲ್ಲಾ ಮಟ್ಟ ಮತ್ತು ರಾಜ್ಯ ಮಟ್ಟದಲ್ಲೂ ಕಾರ್ಕಳದ ಕೀರ್ತಿಯನ್ನು ಬೆಳಗಿಸುವಲ್ಲಿ ಮಹತ್ವದ ಪಾತ್ರವನ್ನು ಪ್ರಚಾರವಿಲ್ಲದೆ ಬೆಳೆಸುತ್ತಾ ಬರುವಲ್ಲಿ ಛಾಪು ಮೂಡಿಸಿ ನಮ್ಮ ಸಂಘಟನೆಯನ್ನು ಕ್ರೀಡಾ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡುವಲ್ಲಿ ಪಾತ್ರವಹಿಸಿದ್ದರು.

