ಆ. 15: ಪುಣೆ ತುಳುಕೂಟದ 26ನೇ ವಾರ್ಷಿಕೋತ್ಸವ ಸಮಾರಂಭ

0
115

ಪುಣೆ : ತುಳು ಕೂಟ (ರಿ.) ಪುಣೆ ಇದರ 26ನೇ ವಾರ್ಷಿಕೋತ್ಸವ ಸಮಾರಂಭವು ಆ. 15ರಂದು ಪುಣೆಯ ಬಾಣೇರ್‌ ಈಣಿ ಮಜಲು ಜಗನ್ನಾಥ ಶೆಟ್ಟಿ ಸಾಂಸ್ಕೃತಿಕ ಬಂಟರ ಭವನದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಮಧ್ಯಾಹ್ನ 2-00 ಗಂಟೆಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಬಳಿಕ ಸಭಾ ಕಾರ್ಯಕ್ರಮ ನಡೆಯಲಿದೆ. ಪುಣೆ ತುಳುಕೂಟದ ಅಧ್ಯಕ್ಷ ದಿನೇಶ್‌ ಶೆಟ್ಟಿ ಕಳತ್ತೂರು ಅಶ್ವಥಗುತ್ತು ಅವರು ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಭಾರತ ತುಳು ಕೂಟದ ಮಾಜಿ ಅಧ್ಯಕ್ಷ ಧರ್ಮಪಾಲ ದೇವಾಡಿಗ, ಪುಣೆ ಬಂಟರ ಸಂಘದ ಅಧ್ಯಕ್ಷ ಅಜಿತ್‌ ಹೆಗ್ಡೆ ಕೆಂಜಾರುಗುತ್ತು, ಭದ್ರಾವತಿ ಬಂಟರ ಸಂಘದ ಅಧ್ಯಕ್ಷ ಲ. ಬಿ. ದಿವಾಕರ ಶೆಟ್ಟಿ, ಸಾಹಿತಿ ಮುದ್ದು ಮೂಡುಬೆಳ್ಳೆ ಭಾಗವಹಿಸಲಿದ್ದಾರೆ. ಉದ್ಯಮಿ ಕೆಕೆ ಶೆಟ್ಟಿ ಅವರಿಗೆ ಬಿರುಧು ಪ್ರದಾನ ಮತ್ತು ಸನ್ಮಾನ ಕಾರ್ಯಕ್ರಮ ನಡೆಯಲಿದ್ದು, ಉದ್ಯಮಿ ಸದಾನಂದ ಕೆ. ಶೆಟ್ಟಿ, ಮಂಗಳೂರು ಮಹಾನಗರ ಪಾಲಿಕೆ ಸದಸ್ಯ ಗಣೇಶ್‌ ಕುಲಾಲ್‌ ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ.

LEAVE A REPLY

Please enter your comment!
Please enter your name here