ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರಳು ಮತ್ತು ಕೆಂಪುಕಲ್ಲುಗಾರಿಕೆ ಸ್ಥಗಿತ:
ದಿನಾಂಕ 11/08/1025 ರಂದು ವಿಧಾನ ಪರಿಷತ್ತಿನ ಕಲಾಪದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪುಕಲ್ಲು ಹಾಗೂ ಮರಳುಗಾರಿಕೆ ಸಂಪೂರ್ಣ ಸ್ಥಗಿತಗೊಂಡಿದ್ದು, ಇವುಗಳನ್ನು ನಂಬಿಕೊಂಡು ಜೀವನ ನಡೆಸುತ್ತಿದ್ದ ಲಕ್ಷಾಂತರ ಕಾರ್ಮಿಕ ಕುಟುಂಬಗಳು ಬೀದಿಗೆ ಬಂದಿರುವ ಬಗ್ಗೆ ಹಾಗೂ ಜಿಲ್ಲೆಯು ಆರ್ಥಿಕತೆಯಿಂದ ಕುಂಠಿತಗೊಂಡಿರುತ್ತದೆ. ಕೂಲಿ ಕಾರ್ಮಿಕರು ಮತ್ತು ಸಣ್ಣ ಗುತ್ತಿಗೆದಾರರು ತೊಂದರೆಯಲಿರುವುದು ಮತ್ತು ಜಿಲ್ಲೆಗೆ ಹೊಸ ನೀತಿಯನ್ನು ಜಾರಿಗೆ ತರಬೇಕೆಂದು ವಿಧಾನ ಪರಿಷತ್ತಿನ ಶಾಸಕರಾದ ಶ್ರೀ ಐವನ್ ಡಿ ಸೋಜಾ ರವರು ವಿಧಾನ ಪರಿಷತ್ತಿನ ಕಲಾಪದ ಶೂನ್ಯ ವೇಳೆಯಲ್ಲಿ ಸಭಾಪತಿಗಳ ಮೂಲಕ ಮಾನ್ಯ ಸಚಿವರ ಗಮನ ಸೆಳೆದರು.
