ಶಿವಮೊಗ್ಗ ಓಪನ್ ಅಂತಾರಾಷ್ಟ್ರೀಯ ಕರಾಟೆ ಕೂಟದಲ್ಲಿ ತ್ವಿಷಾ ಕುಂದರ್‌ಗೆ ದ್ವಿಪದಕ ಕೀರ್ತಿ

0
148

ಆ.10ರಂದು ಶಿವಮೊಗ್ಗದಲ್ಲಿ ನಡೆದ ‘ಶಿವಮೊಗ್ಗ ಓಪನ್ 6ನೇ ಅಂತಾರಾಷ್ಟ್ರೀಯ ಕರಾಟೆ ಸ್ಪರ್ಧಾ ಕೂಟ’ದಲ್ಲಿ ಮಲ್ಪೆ ಶ್ರೀ ನಾರಾಯಣಗುರು ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿಯ ವಿದ್ಯಾರ್ಥಿನಿ ತ್ವಿಷಾ ಕುಂದರ್ ಇವರು ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ಕಟ ವಿಭಾಗದಲ್ಲಿ ಬೆಳ್ಳಿಯ ಪದಕವನ್ನು ಪಡೆದುಕೊಂಡಿರುತ್ತಾರೆ.

ಇವರು ಕೃಷ್ಣ ಕುಂದರ್ ಹಾಗೂ ಗೀತಾ ಕರ್ಕೇರ ದಂಪತಿಗಳ ಪುತ್ರಿ. ಇವರು ಬುಡೋಕಾನ್ ಕರಾಟೆ ಹಾಗೂ ಸ್ಪೋರ್ಟ್ಸ್ ಅಸೋಸಿಯೇಷನ್ ಕರ್ನಾಟಕ ಸಂಸ್ಥೆಯ ಮುಖ್ಯ ಶಿಕ್ಷಕರ ವಾಮನ್ ಪಾಲನ್ ಹಾಗೂ ಮೇಘ ಇವರಿಂದ ಕರಾಟೆ ತರಬೇತಿ ಪಡೆಯುತ್ತಿದ್ದಾರೆ.

LEAVE A REPLY

Please enter your comment!
Please enter your name here