ಸುರತ್ಕಲ್: ಕಾಲೇಜಿಗೆಂದು ಹೋದ ವಿದ್ಯಾರ್ಥಿನಿ ನಾಪತ್ತೆಯಾಗಿರುವ ಘಟನೆ ಕಾಟಿಪಳ್ಳ ಗ್ರಾಮದ ಗಣೇಶಕಟ್ಟೆ ಎಂಬಲ್ಲಿ ನಡೆದಿದೆ. ಗಣೇಶಕಟ್ಟೆ ನಿವಾಸಿ ಪ್ರಜ್ಞಾ (18) ನಾಪತ್ತೆಯಾದಾಕೆ.
ಪ್ರಜ್ಞಾ ಸೈಂಟ್ ಅಲೋಶಿಯಸ್ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಸಿ.ಎ ವ್ಯಾಸಂಗ ಮಾಡುತ್ತಿದ್ದು, ಸೆಪ್ಟೆಂಬರ್ 1 ರಂದು ಕಾಲೇಜು ಸಮವಸ್ತ್ರ ಧರಿಸಿ ಕಾಲೇಜಿಗೆ ಹೋಗುವುದಾಗಿ ತಾಯಿಯಲ್ಲಿ ತಿಳಿಸಿ ಹೋದವರು ಮನೆಗೆ ಬಾರದೆ ಕಾಣೆಯಾಗಿರುವ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯುವತಿ ಕಾಣೆಯಾದ ದಿನ ಬ್ಲೂ ಬಣ್ಣದ ಅರ್ಧ ತೋಳಿನ ಕಾಲೇಜು ಸಮವಸ್ತ್ರ ಶರ್ಟ್ ಹಾಗೂ ಕಪ್ಪು ಬಣ್ಣದ ಕಾಲೇಜು ಸಮವಸ್ತ್ರ, ಪ್ಯಾಂಟ್ ಧರಿಸಿದ್ದರು. ಕಾಣೆಯಾದವರ ಗುರುತು ಪತ್ತೆಯಾದಲ್ಲಿ ಸುರತ್ಕಲ್ ಪೊಲೀಸ್ ಠಾಣೆ ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.