ವಿವೇಕಾನಂದ ಪ.ಪೂ. ಕಾಲೇಜು: “ಫುಡ್ ಫೆಸ್ಟ್”ನ ಉದ್ಘಾಟನೆ

0
150

ಆಹಾರೋದ್ಯಮದಲ್ಲಿ ವಿಪುಲವಾದ ಅವಕಾಶಗಳು: ಗಿರೀಶ್ ಎಂ.

ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ವಾಣಿಜ್ಯ ಸಂಘದ ವತಿಯಿಂದ “ಫುಡ್ ಫೆಸ್ಟ್” ಆಯೋಜಿಸಲಾಯಿತು.

ಕಾರ್ಯಕ್ರಮದ ಉದ್ಘಾಟಕರಾಗಿ ಗಿರೀಶ್ ಎಂ., ಮಾಲೀಕರು, ಸಂತೃಪ್ತಿ ಹೋಟೆಲ್, ದರ್ಬೆ, ಪುತ್ತೂರು ಇವರು ಆಗಮಿಸಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ವಿನೂತನ ರೀತಿಯಲ್ಲಿ ನೆರವೇರಿಸಿ ಮಾತನಾಡಿದ ಅವರು “ಕಲಿಕೆಯ ಜೊತೆಗೆ ಗಳಿಕೆ ಎಂಬ ಯೋಜನೆ ಇಂದಿನ ವಿದ್ಯಾರ್ಥಿಗಳಲ್ಲಿ ಬಂದರೆ ಅದಕ್ಕೆ ಪೂರಕವಾದ ಯೋಜನೆಗಳು ರೂಪುಗೊಳ್ಳುತ್ತವೆ. ಈ ರೀತಿ ಕಲಿಕೆ ಮತ್ತು ಗಳಿಕೆ ಜೊತೆಯಾಗಿ ಹೋದರೆ ದೇಶದ ಅಭಿವೃದ್ಧಿಯ ಕಡೆಗೆ ಒಂದು ಹೆಜ್ಜೆ ಇಟ್ಟಂತೆ. ವಿವಿಧ ರೀತಿಯ ಉದ್ಯಮ ಕ್ಷೇತ್ರಗಳಲ್ಲಿ ಆಹಾರೋದ್ಯಮಕ್ಕೆ ಎಂದಿಗೂ ಬೇಡಿಕೆ ಕಡಿಮೆಯಾಗುವುದಿಲ್ಲ. ಈ ಕ್ಷೇತ್ರದಲ್ಲಿಯೂ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳುವ ಬಗೆಗೆ ಇಂದಿನ ಜನಾಂಗವು ಯೋಚಿಸಬೇಕಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ದೇವಿಚರಣ್ ರೈ ಎಂ. ಉಪಸ್ಥಿತರಿದ್ದು, ಆಹಾರಮೇಳದಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳಿಗೆ ಹಾಗೂ ಕಾರ್ಯಕ್ರಮದ ಯಶಸ್ಸಿಗೆ ಶುಭ ಹಾರೈಸಿದರು. ದ್ವಿತೀಯ ವಾಣಿಜ್ಯ ವಿಭಾಗದ ಗೌರಿ ಸ್ವಾಗತಿಸಿ, ವೈಶಾಲಿ ವಂದಿಸಿದರು. ದೀಪಕ್ ಗುಜಾರ್ ಕಾರ್ಯಕ್ರಮವನ್ನು ನಿರೂಪಿಸಿದರು. ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು.

LEAVE A REPLY

Please enter your comment!
Please enter your name here