ಉಳ್ಳಾಲ ತಾಲೂಕಿನ ಸೋಮೇಶ್ವರದಲ್ಲಿರುವ ಆನಂದಾಶ್ರಮ ಪ್ರೌಢಶಾಲೆಯ ಆವರಣದಲ್ಲಿ ವನಮಹೋತ್ಸವದ ಅಂಗವಾಗಿ ಲಯನ್ಸ್ ಕ್ಲಬ್ ಮಂಗಳೂರು ಸೋಮೇಶ್ವರದ ವತಿಯಿಂದ ಸಸಿಗಳನ್ನು ನೆಡಲಾಯಿತು. ಸ್ಥಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯ ಶ್ರೀ ಗುರುಮೂರ್ತಿ ಅವರ ಅಧ್ಯಕ್ಷತೆಯಲ್ಲಿ ಕ್ಲಬ್ ಅಧ್ಯಕ್ಷ ಲಯನ್ ವಿಜಯನ್ ಕೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯದರ್ಶಿ ಕೆ. ಗೋಪಿನಾಥ್ ಅವರು ವಿದ್ಯಾರ್ಥಿಗಳಿಗೆ ವನಮಹೋತ್ಸವದ ಉದ್ದೇಶ ಮತ್ತು ಅವಶ್ಯಕತೆಗಳ ಬಗ್ಗೆ ಅರಿವು ಮೂಡಿಸಿದರು. ಲಯನ್ಸ್ ಕೆ. ಪುಷ್ಪಾ, ವಸಂತ ರೈ, ರಾಘವನ್ ಮೂತಲ್ ಮತ್ತು ಫ್ಲೇವಿಯಾ ಡಿ’ಸೋಜಾ ಉಪಸ್ಥಿತರಿದ್ದರು. ಶಿಕ್ಷಕರಾದ ಶ್ರೀ ಶ್ರೀನಿವಾಸ್ ಸ್ವಾಗತಿಸಿದರು ಮತ್ತು ಕ್ಲಬ್ ಕಾರ್ಯದರ್ಶಿ ಲಯನ್ ನಿತೀಶ್ ಕೃಷ್ಣ ಧನ್ಯವಾದ ಅರ್ಪಿಸಿದರು.

