ಬೆಂಗಳೂರು ಮೂಲದ ಸೇನಾಧಿಕಾರಿ ಹೃದಯಾಘಾತದಿಂದ ಸಾವು, ಪಾರ್ಕ್​ ಮಾಡಿದ್ದ ಕಾರಿನಲ್ಲಿತ್ತು ಶವ!

0
118

ಜಬಲ್ಪುರ: ಹೃದಯಾಘಾತ ದಿಂದ ಸೇನಾಧಿಕಾರಿಯೊಬ್ಬರು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಪಾರ್ಕ್​ ಮಾಡಿದ್ದ ಕಾರಿನಲ್ಲಿ ಡ್ರೈವರ್​ ಸೀಟಿನಲ್ಲಿ ಕುಳಿತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಮಿಲಿಟರಿ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದ ಮೇಜರ್ ಬಿ. ವಿಜಯ್ ಕುಮಾರ್ ಸದರ್ ಬಜಾರ್‌ನಲ್ಲಿರುವ ಇಂಡಿಯನ್ ಕಾಫಿ ಹೌಸ್ ಬಳಿ ತಮ್ಮ ಕಾರಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಅಲ್ಲೇ ಹೋಗುತ್ತಿದ್ದವರು ಅವರು ಚಾಲಕನ ಸೀಟಿನಲ್ಲಿ ತುಂಬಾ ಹೊತ್ತಿನಿಂದ ಅವರು ಕುಳಿತಿರುವುದನ್ನು ಗಮನಿಸಿ ಅನುಮಾನಗೊಂಡು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಒಳಗಿದ್ದವ್ಯಕ್ತಿ ಮೇಜರ್ ವಿಜಯ್ ಕುಮಾರ್ ಎಂದು ಗುರುತಿಸಲಾಗಿದೆ. ಸೇನಾ ಅಧಿಕಾರಿಗಳಿಗೆ ಮಾಹಿತಿ ನೀಡಲಾಯಿತು. ಮತ್ತು ಮೇಜರ್ ಕುಮಾರ್ ಅವರನ್ನು ಆಂಬ್ಯುಲೆನ್ಸ್ ಮೂಲಕ ಮಿಲಿಟರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು. ಸಂಪೂರ್ಣ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಲು ಪೊಲೀಸರು ಹತ್ತಿರದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಬುಧವಾರ ತಡರಾತ್ರಿ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಗುರುವಾರ ಬೆಳಗ್ಗೆ ಅವರ ಕುಟುಂಬ ಬೆಂಗಳೂರಿನಿಂದ ಆಗಮಿಸಿದೆ. ಅಗತ್ಯ ವಿಧಿವಿಧಾನಗಳನ್ನು ಪೂರ್ಣಗೊಳಿಸಿದ ನಂತರ, ದೇಹವನ್ನು ಅವರ ಕುಟುಂಬಕ್ಕೆ ಹಸ್ತಾಂತರಿಸಲಾಯಿತು. ಮೇಜರ್ ಬಿ. ವಿಜಯ್ ಕುಮಾರ್​ ಅವರಿಗೆ ಸೇನೆಯಲ್ಲಿ ಒಳ್ಳೆಯ ಹೆಸರಿತ್ತು.

LEAVE A REPLY

Please enter your comment!
Please enter your name here