ಅಕ್ಷಯ ಪದವಿ ಕಾಲೇಜು ಪುತ್ತೂರಿನ ಭಾಷಾ ಪ್ರಾಧ್ಯಾಪಕಿ ರಶ್ಮಿತಾ ಸುರೇಶ್ ಜೋಗಿಬೆಟ್ಟು ಇವರಿಗೆ ಭಾವೈಕ್ಯತಾ ಸಾಹಿತ್ಯ ರತ್ನ ಪ್ರಶಸ್ತಿ

0
167

ಮಂಗಳೂರು: ಅಂತರ್ ರಾಜ್ಯ ಮಟ್ಟದಲ್ಲಿ ಲೇಖನ, ಪ್ರಬಂಧ, ಕಥೆ ಸೇರಿದಂತೆ ಸಾಹಿತ್ಯ ಕ್ಷೇತ್ರದಲ್ಲಿ ಪಂಚ ಭಾಷೆಗಳಲ್ಲಿ ಬರಹದ ಮೂಲಕ ಹಲವಾರು ಬಹುಮಾನಗಳನ್ನು ಪಡೆದ ಸಾಧಕಿ, ತಾಳಮದ್ದಳೆ ಅರ್ಥಗಾರಿಕೆ, ಆಲ್ಬಮ್ ಸಾಂಗ್ ಗಳಲ್ಲಿ ನಟಿಸಿ, ನಾಟಕ ರಚನೆ ಮತ್ತು ಅಭಿನಯದೊಂದಿಗೆ ನಿರೂಪಣೆಯಲ್ಲಿ ಈಗಾಗಲೇ ಹಲವು ಪ್ರಶಸ್ತಿಗಳನ್ನು ಪಡೆದಿರುವ ಬಹುಮುಖ ಪ್ರತಿಭೆಯಾದ ರಶ್ಮಿತಾ ಸುರೇಶ್ ಜೋಗಿಬೆಟ್ಟು ಇವರು ಕರ್ನಾಟಕ ರಾಜ್ಯ ಭಾವೈಕ್ಯ ಪರಿಷತ್ ದ. ಕ ಹಾಗೂ ಭಾರತೀಯ ಮಾದಕ ದ್ರವ್ಯ ವಿರೋಧಿ ಮಂಡಳಿ ಕಾರ್ಯಕ್ರಮದಲ್ಲಿ ಭಾವೈಕ್ಯತಾ ಸಾಹಿತ್ಯ ರತ್ನ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ.

LEAVE A REPLY

Please enter your comment!
Please enter your name here