ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ‘ಸಿರಿ ಕ್ಲಬ್’ ಮತ್ತು ತಾಲೂಕು ಸರ್ವಜನಿಕ ಆಸ್ಪತ್ರೆ ಬೆಳ್ತಂಗಡಿ-ಐ.ಸಿ.ಟಿ.ಸಿ ವಿಭಾಗ ಇವರ ಸಹಯೋಗದಲ್ಲಿ ಸಿರಿ ಸಂಸ್ಥೆಯ ಸಿಬ್ಬಂದಿಗಳಿಗೆ ಉಚಿತ ‘ಸಮಗ್ರ ಆರೋಗ್ಯ ತಪಾಸಣಾ ಶಿಬಿರ’ ದಿನಾಂಕ ೨೯-೦೯-೨೦೨೫ ರಂದು ಬೆಳ್ತಂಗಡಿ ಸಿರಿ ಕೇಂದ್ರ ಕಚೇರಿಯಲ್ಲಿ ಜರುಗಿತು.
ಸಿರಿ ಸಂಸ್ಥೆಯ ವ್ಯವಸ್ಥಾಪಕ ನರ್ದೇಶಕರಾದ ಕೆ.ಎನ್ ಜನರ್ಧನ ಹಾಗೂ ತಾಲೂಕು ಆರೋಗ್ಯಾಧಿಕಾರಿ ಕಛೇರಿಯ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ಅಮ್ಮಿಯವರು ದೀಪ ಪ್ರಜ್ವಲಿಸಿ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿದರು.
ಸಿರಿ ಸಂಸ್ಥೆಯ ವ್ಯವಸ್ಥಾಪಕ ನರ್ದೇಶಕರಾದ ಕೆ. ಎನ್. ಜನರ್ಧನರವರು ಕರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಯಾವುದೇ ಖಾಯಿಲೆಯನ್ನು ಪ್ರಾರಂಭಿಕ ಹಂತದಲ್ಲಿಯೆ ಪತ್ತೆ ಹಚ್ಚಿ ಅದಕ್ಕೆ ಸೂಕ್ತ ಚಿಕಿತ್ಸೆಯನ್ನು ಪಡೆಯುವುದರಿಂದ ಮುಂದಾಗುವ ಬಾರಿ ಅನಾಹುತವನ್ನು ತಪ್ಪಿಸಬಹುದಾಗಿದೆ. ನಮ್ಮ ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಕಂಡಲ್ಲಿ ಅದನ್ನು ಗೌಪ್ಯವಾಗಿಡದೆ ಸಕಾಲದಲ್ಲಿ ತಜ್ಞ ವೈದ್ಯರಿಂದ ಚಿಕಿತ್ಸೆ ಪಡೆಯುವುದರಿಂದ ನಮ್ಮ ಅತ್ಯಮೂಲ್ಯ ಜೀವವನ್ನು ಕಾಪಾಡಿಕೊಳ್ಳಲು ಸಹಕಾರಿಯಾಗಿದೆ. ಪೂಜ್ಯರು ಹಾಗೂ ಮಾತೃಶ್ರೀ ಅಮ್ಮನವರ ಆಶ್ರಯದಲ್ಲಿ ನಡೆಯುತ್ತಿರುವ ನಮ್ಮ ಸಿರಿ ಸಂಸ್ಥೆಯಲ್ಲಿ ಶೇ.೯೦ರಷ್ಟು ಮಹಿಳಾ ಸಿಬ್ಬಂದಿಗಳೇ ಇದ್ದು, ಇಲ್ಲಿ ದುಡಿಯುವ ಪ್ರತಿಯರ್ವ ಮಹಿಳೆಯರೂ ಆರೋಗ್ಯವಾಗಿದ್ದಲ್ಲಿ, ಆಕೆಯ ಕುಟುಂಬ ಪರಿವಾರವೂ ಉತ್ತಮ ಆರೋಗ್ಯಪರ್ಣ ವಾತಾವರಣವನ್ನು ಹೊಂದಲು ಸಾಧ್ಯ. ಹಾಗಾಗಿ ಎಲ್ಲರೂ ತಮ್ಮ ಆರೋಗ್ಯ ತಪಾಸಣೆಯನ್ನು ಮಾಡಿಸುವ ಮುಖಾಂತರ ಶಿಬಿರದ ಸದುಪಯೋಗವನ್ನು ಪಡೆದು ಆರೋಗ್ಯವಂತರಾಗಿ ಬಾಳಿ ಎಂದು ಶುಭ ಹಾರೈಸಿದರು.
ಸಿರಿ ಸಂಸ್ಥೆಯಲ್ಲಿ ದುಡಿಯುತ್ತಿರುವ ಸಿಬ್ಬಂದಿಗಳ ಆರೋಗ್ಯದ ಹಿತದೃಷ್ಟಿಯಿಂದ ಇಂತಹ ಮಹತ್ವಪರ್ಣವಾದ ಆರೋಗ್ಯ ಶಿಬಿರವನ್ನು ಆಯೋಜಿಸಿರುವ ತಾಲೂಕು ಸರ್ವಜನಿಕ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ ರ್ಗದವರಿಗೆ, ಸಿರಿ ಕ್ಲಬ್ನ ಪದಾಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸಿದರು.
ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಅಮ್ಮಿಯವರು ಕರ್ಯಕ್ರಮವನ್ನುದ್ದೇಶಿಸಿ ಮಾತನಾಡಿ ಸಾಂಕ್ರಾಮಿಕ ಮತ್ತು ಅಸಾಂಕ್ರಾಮಿಕ ಇತ್ಯಾದಿ ಯಾವುದೇ ಖಾಯಿಲೆಗಳು ಬಂದ ನಂತರ ಅದಕ್ಕೆ ಚಿಕಿತ್ಸೆ ಪಡೆಯುವ ಬದಲಾಗಿ, ಈ ಖಾಯಿಲೆಗಳನ್ನು ಬರದಂತೆ ಮುನ್ನೆಚ್ಚರಿಕೆ ವಹಿಸುವುದು ಸೂಕ್ತ. ಹಾಗಾಗಿ ಸಿರಿ ಸಿಬ್ಬಂದಿಗಳ ಮೇಲೆ ವಿಶೇಷ ಕಾಳಜಿ ಹೊಂದಿರುವ ಸಿರಿ ಎಂ.ಡಿಯವರ ಮರ್ಗರ್ಶನದಲ್ಲಿ ತಾಲೂಕು ಸರ್ವಜನಿಕ ಆಸ್ಪತ್ರೆ ಬೆಳ್ತಂಗಡಿ ಐ.ಸಿ.ಟಿ.ಸಿ ವಿಭಾಗದ ಸಹಯೋಗದಲ್ಲಿ ತಜ್ಞ ವೈದ್ಯರು ಹಾಗೂ ಸಿಬ್ಬಂದಿಗಳ ಸಹಕಾರದಲ್ಲಿ ಈ ಆರೋಗ್ಯ ತಪಾಸಣಾ ಶಿಬಿರವನ್ನು ರ್ಪಡಿಸಲಾಗಿದೆ ಎಂದರು.
ಕರ್ಯಕ್ರಮದಲ್ಲಿ ತಾಲೂಕು ಸರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ|| ಮನೀಷಾ, ಹಿರಿಯ ಆರೋಗ್ಯ ಸುರಕ್ಷಾ ಅಧಿಕಾರಿ ಶ್ರೀಮತಿ ಲೀಲಾವತಿ, ಐ.ಟಿ.ಸಿ.ಟಿ ಆಪ್ತ ಸಮಾಲೋಚಕರಾದ ರ್ಮಪಾಲ್, ಬಿ.ಪಿ.ಎಂ ಅಜೇಯ್, ಆರೋಗ್ಯ ಕರ್ಯರ್ತೆಯರು, ಆಶಾ ಕರ್ಯರ್ತೆಯರು ಉಪಸ್ಥಿತರಿದ್ದರು.
ಸಿರಿ ಕ್ಲಬ್ ಕರ್ಯರ್ಶಿಗಳಾದ ವಿನ್ಸೆಂಟ್ ಲೋಬೋ ಸ್ವಾಗತಿಸಿ, ಸಿರಿ ಗೋದಾಮು ಪ್ರಬಂಧಕರಾದ ಜೀವನ್ ಕರ್ಯಕ್ರಮ ನಿರೂಪಿಸಿ, ಸಿರಿ ಕ್ಲಬ್ ಅಧ್ಯಕ್ಷೆ ಕು| ರ್ಷಿತಾರವರು ಧನ್ಯವಾದವಿತ್ತರು.
ಸುಮಾರು ೧೩೬ ಮಂದಿ ಸಿರಿ ಸಿಬ್ಬಂದಿಗಳು ಆರೋಗ್ಯ ತಪಾಸಣಾ ಶಿಬಿರದ ಸದುಪಯೋಗವನ್ನು ಪಡೆದುಕೊಂಡರು.