- ವಿವೇಕಾನಂದ ಪದವಿಪೂರ್ವ ವಿದ್ಯಾಲಯದಲ್ಲಿ ವಿಶೇಷ ಉಪನ್ಯಾಸಗಳಲ್ಲಿ ಭಾಗಿ
- ಸ್ವಾಮಿ ವಿವೇಕಾನಂದರ ಚಿಕಾಗೋ ಉಪನ್ಯಾಸದ 132ನೇ ವರ್ಷಾಚರಣೆ ಪ್ರಯುಕ್ತ ವಿಶೇಷ ಉಪನ್ಯಾಸಗಳು
- ವಿದ್ಯಾರ್ಥಿಗಳಿಗೆಹಾಗೂಉಪನ್ಯಾಸಕರಿಗೆ ಪ್ರತ್ಯೇಕಉಪನ್ಯಾಸಗಳು
- ಸಂಜೆ ಆಸಕ್ತ ಸಾರ್ವಜನಿಕರಿಗಾಗಿ ವಿಶೇಷ ಉಪನ್ಯಾಸ
ಚಿಂತಕರು ಹಾಗೂ ಖ್ಯಾತ ವಾಗ್ಮಿಗಳಾದ ಚಕ್ರವರ್ತಿ ಸೂಲಿಬೆಲೆಯವರು ಇಂದು (11 ಅಕ್ಟೋಬರ್ 2025ಶನಿವಾರದಂದು) ಪುತ್ತೂರಿಗೆ ಭೇಟಿ ನೀಡಲಿದ್ದಾರೆ. ಪುತ್ತೂರಿನ ನೆಹರು ನಗರದ ವಿವೇಕಾನಂದ ಆವರಣದಲ್ಲಿರುವ ವಿವೇಕಾನಂದ ಪದವಿಪೂರ್ವ ವಿದ್ಯಾಲಯದ ಆವರಣದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.
ಬೆಳಗ್ಗೆ 9.30ಕ್ಕೆ ಸರಿಯಾಗಿ ವಿವೇಕಾನಂದ ಆವರಣದ ಕೇಶವ ಸಂಕಲ್ಪ ಸಭಾಭವನದಲ್ಲಿ ವಿವೇಕ ವಿಜಯ ವಿಶೇಷ ಉಪನ್ಯಾಸಗಳ ಉದ್ಘಾಟನೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿಗಳಾದ ಡಾ. ಕೆ. ಎಂ. ಕೃಷ್ಣ ಭಟ್ಅವರು ನೆರವೇರಿಸಲಿದ್ದಾರೆ. ಉದ್ಘಾಟನೆಯ ನಂತರ ನಡೆಯುವ ಮೊದಲ ಅವಧಿಯಲ್ಲಿ ಚಕ್ರವರ್ತಿ ಸೂಲಿಬೆಲೆಯವರು ವಿದ್ಯಾರ್ಥಿಗಳನ್ನುದ್ದೇಶಿಸಿ ಭಾರತ ವಂದನಾ – ವಿವೇಕ ಚಿಂತನಎಂಬ ವಿಷಯದ ಕುರಿತು ಮಾತನಾಡಲಿದ್ದಾರೆ. ಈ ಸಂದರ್ಭದಲ್ಲಿ ವಿವೇಕಾನಂದ ಪದವಿಪೂರ್ವ ವಿದ್ಯಾಲಯದ ಆಡಳಿತ ಮಂಡಳಿಯ ಅಧ್ಯಕ್ಷರಾದ ²æÃರವೀಂದ್ರ ಪಿ. ಅವರು ಉಪಸ್ಥಿತರಿರಲಿದ್ದಾರೆ. ವಿವೇಕಾನಂದ ಪದವಿಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳು ಈ ಅವಧಿಯಲ್ಲಿ ಭಾಗವಹಿಸಲಿದ್ದಾರೆ.
ಎರಡನೇ ಅವಧಿಯು ಬೆಳಗ್ಗೆ 11.30ಕ್ಕೆ ಸರಿಯಾಗಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಶಿಕ್ಷಕರಿಗಾಗಿ ನಡೆಯಲಿದ್ದು ²æÃಚಕ್ರವರ್ತಿ ಸೂಲಿಬೆಲೆಯವರು ಶಿಕ್ಷಕರನ್ನುದ್ದೇಶಿಸಿ ರಾಷ್ಟ್ರ gÀPÀëuÁ- ವಿವೇಕ ಶಿಕ್ಷಣಎಂಬ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ. ವಿವಿಧ ಶಾಲಾ ಕಾಲೇಜುಗಳ ಸುಮಾರು 250 ಶಿಕ್ಷಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ವಿಶೇಷ ಅಭ್ಯಾಗತರಾಗಿ ಬೆಟ್ಟಂಪಾಡಿ ಸರಕಾರಿ ಪ್ರಥಮದರ್ಜೆ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ. ವರದರಾಜ ಚಂದ್ರಗಿರಿ ಭಾಗವಹಿಸಲಿದ್ದಾರೆ. ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತಮಂಡಳಿಯನಿರ್ದೇಶಕರಾದಡಾ. ಕೆ. ಎನ್. ಸುಬ್ರಹ್ಮಣ್ಯ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.
ಮೂರನೇ ಅವಧಿಯಲ್ಲಿ “ಸಿಂದೂರ – ಭಾರತದ ವಿಶ್ವರೂಪ ದರ್ಶನ” ಎಂಬ ವಿಷಯದ ಕುರಿತು ಆಸಕ್ತರಿಗಾಗಿ ವಿಶೇಷ ಅವಧಿ ಹಾಗೂ ಸಂವಾದವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿಸಂಜೆ 4.30 ಗಂಟೆಗೆ ಸರಿಯಾಗಿ ನಡೆಯಲಿದ್ದು, ಈಕಾರ್ಯಕ್ರಮದಲ್ಲಿಚಕ್ರವರ್ತಿ ಸೂಲಿಬೆಲೆಯವರು ವಿಷಯ ಮಂಡನೆ ನಡೆಸಿ ಸಂವಾದದಲ್ಲಿ ಭಾಗವಹಿಸಲಿದ್ದಾರೆ. ಪುತ್ತೂರಿನ ಮಹಾವೀರ ಆಸ್ಪತ್ರೆಯ ಆರ್ಥೋಪೆಡಿಕ್ ಸರ್ಜನ್ ಡಾ. ಸಚಿನ್ ಶಂಕರ್ ಹಾರಕೆರೆ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ. ದೇಶದ ಭದ್ರತೆ, ಸಾರ್ವಭೌಮತೆ ಮತ್ತು ಅಖಂಡತೆಗೆ ದೇಶದ ಸಶಸ್ತ್ರ ಪಡೆಗಳ ಕೊಡುಗೆಯನ್ನು ಸ್ಮರಿಸುತ್ತಾ, ಭಾರತದ ಜಾಗತಿಕ ಶಕ್ತಿಯ ಪ್ರದರ್ಶನದ ವಿಷಯಗಳನ್ನು ಕೇಂದ್ರೀಕರಿಸಿ ಈ ಅವಧಿ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ 81050 72386, 89719 24424 ಸಂಪರ್ಕ ಸಂಖ್ಯೆಗಳನ್ನು ಸಂಪರ್ಕಿಸಬಹುದು.