ಪಣಂಬೂರಿನ ಪಾರದೀಪ್ ಫಾಸ್ಪೆಟ್ಸ್ ನಿಂದ ವಿಶೇಷ ಮಕ್ಕಳ ಶಾಲೆಗೆ ವ್ಯಾನ್ ಕೊಡುಗೆ

0
24

ವರದಿ ರಾಯಿ ರಾಜ ಕುಮಾರ

ಪಣಂಬೂರಿನ ಪಾರದೀಪ್ ಫಾಸ್ಪೆಟ್ಸ್ ನಿಂದ ಕುಲಶೇಖರದ ಶ್ರೀ ದುರ್ಗಾ ಐಕ್ಯಮ್ ವಿಶೇಷ ಮಕ್ಕಳ ಶಾಲೆಗೆ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವ್ಯಾನ್ ನ ಕೊಡುಗೆ ನೀಡಲಾಯಿತು. ಪಿಪಿಎಲ್ ಕಂಪನಿಯ ಸಿಎಂಓ ಎಸ್. ಗಿರೀಶ್ ಅವರು ಸಂಸ್ಥೆಯ ವತಿಯಿಂದ ಸಿಎಸ್ ಆ‌ರ್ ಯೋಜನೆ ಅಡಿ ಶಾಲೆಗೆ ಕೊಡುಗೆ ನೀಡಲಾಗಿದೆ. ಸುರತ್ಕಲ್ ರೋಟರಿ ಕ್ಲಬ್‌ ಅಧ್ಯಕ್ಷ ರಾಮಚಂದ್ರ ಬಿ. ಕುಂದರ್ ಮಾತನಾಡಿ ವಿಶೇಷ ಸಾಮರ್ಥ್ಯದ ಮಕ್ಕಳ ಬಗ್ಗೆ ವಿಶೇಷ ಕಾಳಜಿ ವಹಿಸುವುದರ ಮೂಲಕ ಮುಖ್ಯ ವಾಹಿನಿ ಗೆ ತರ ಬೇಕಾಗಿದೆ ಎಂದರು. ದುರ್ಗಾ ಟ್ರಸ್ಟ್ ನ ಮ್ಯಾನೇಜಿಂಗ್ ಟ್ರಸ್ಟಿ ಕಮಲಾಕ್ಷಿ ಕೃತಜ್ಞತೆ ಸಲ್ಲಿಸಿದರು. ಪಿಪಿ ಎಲ್ ಜೆ ಜಿ ಎಂ ಚೇತನ್ ಮೆಂಡೋನ್ಸ, ಸುರತ್ಕಲ್ ರೋಟರಿ ಕ್ಲಬ್ ಉಪಾಧ್ಯಕ್ಷ ರಮೇಶ್‌ ರಾವ್ ಮಧ್ಯ, ಕಾರ್ಯದರ್ಶಿ ರಾಮಮೋಹನ್. ವೈ., ಕ್ಲಬ್ ಸೇವಾ ನಿರ್ದೇಶಕ ಕೃಷ್ಣ ಮೂರ್ತಿ, ಪಬ್ಲಿಕ್ ಇಮೇಜ್ ನಿರ್ದೇಶಕ ಡಾ. ರಾಜಮೋಹನ್ ರಾವ್. ಕೆ. ದುರ್ಗಾ ಟ್ರಸ್ಟ್ ಪದಾಧಿ ಕಾರಿಗಳು, ರೋಟರಿ ಸದಸ್ಯರು ಉಪಸ್ಥಿತರಿದ್ದರು. ದುರ್ಗಾ ಟ್ರಸ್ಟ್ ಕಾರ್ಯ ದರ್ಶಿ ಸಂತೋಷ್ ಕುಮಾರ್ ನಿರೂಪಿಸಿದರು.

LEAVE A REPLY

Please enter your comment!
Please enter your name here