ತುಳು ಸಾಹಿತ್ಯದಲ್ಲಿ ತುಳುನಾಡಿನ ಬದುಕಿನ ಮೌಲ್ಯಗಳು ಅಂತರ್ಗತವಾಗಿದೆ: ಡಾ.ಜ್ಯೋತಿ ಚೇಳೈರು

0
75

‘ಬಲೆ ತುಳು ಓದುಗ’  ಅಭಿಯಾನ

ಮಂಗಳೂರು:     ತುಳು ಸಾಹಿತ್ಯ  ಓದುವ ಮೂಲಕ ನಮ್ಮ ಬದುಕಿನ ಬಗ್ಗೆ ಅವಲೋಕನ ಮಾಡಿಕೊಳ್ಳಲು ಸಾಧ್ಯವಾಗುತ್ತದೆ,      ತುಳುವರ  ಬದುಕು,    ಅದರಲ್ಲಿ ಅಂತರ್ಗತವಾಗಿರುವ ಮೌಲ್ಯಗಳು, ಜೀವನ ಆದರ್ಶಗಳು    ಅರ್ಥವಾಗುತ್ತದೆ  ಎಂದು         ಚೇಳೈರು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಜ್ಯೋತಿ ಚೇಳೈರು ಅವರು ಹೇಳಿದರು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಚೇಳೈರು ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಬುಧವಾರ ಆಯೋಜಿಸಿದ ‘ಅಕಾಡೆಮಿಡ್ ಒಂಜಿ ದಿನ ಬಲೆ ತುಳು ಓದುಗ ‘ ಅಭಿಯಾನದ ಹನ್ನೊಂದನೇ ಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಕರಾವಳಿ ಲೇಖಕಿಯರ ಮತ್ತು ವಾಚಿಕಿಯರ ಸಂಘದ ಪ್ರಧಾನ ಕಾರ್ಯದರ್ಶಿ ಯಶೋದಾ ಮೋಹನ್  ಅವರು ಮಾತನಾಡಿ,     ಬಾಲ್ಯದಲ್ಲಿ ಹಿರಿಯವರು ತರುತ್ತಿದ್ದ ಪತ್ರಿಕೆ   ಓದಿದ ಅನುಭವ ಸಾಹಿತ್ಯ ಅಭಿರುಚಿ ಮೂಡಿಸಿಕೊಳ್ಳಲು ಸಾಧ್ಯವಾಯಿತು ಎಂದರು. ಮಕ್ಕಳಿಗೆ ಓದಿನ ಅಭಿರುಚಿ ಮೂಡಿಸುವ ಪ್ರಯತ್ನ ಶ್ಲಾಘನೀಯ  ಎಂದು ಹೇಳಿದರು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

  ಕಾರ್ಯಕ್ರಮದಲ್ಲಿ ಕಾಲೇಜಿನ ಹಿರಿಯ ಪ್ರಾಧ್ಯಾಪಕ ಚಂದ್ರನಾಥ ಎಂ.,ವಿದ್ಯಾರ್ಥಿ ಸಂಚಾಲಕಿ ಅಕ್ಷತಾ ಉಪಸ್ಥಿತರಿದ್ದರು.

 ಅಕಾಡೆಮಿಯ ಸದಸ್ಯ  ಸಂತೋಷ್ ಶೆಟ್ಟಿ ಹಿರಿಯಡ್ಕ ಕಾರ್ಯಕ್ರಮ  ನಿರೂಪಿಸಿ, ವಂದಿಸಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಚೇಳೈರು ಸರಕಾರಿ ಪದವಿ ಪೂರ್ವ ಕಾಲೇಜಿನ 30  ವಿದ್ಯಾರ್ಥಿಗಳು ಅಕಾಡೆಮಿಯ ಗ್ರಂಥಾಲಯದಲ್ಲಿ ತುಳು ಸಾಹಿತ್ಯ ಕೃತಿಗಳನ್ನು ಓದಿ ಸಂಜೆಯ ಸಮಾರೋಪ ಕಾರ್ಯಕ್ರಮದಲ್ಲಿ  ತಮ್ಮ  ಅಭಿಪ್ರಾಯ ಹಂಚಿಕೊಂಡರು.

LEAVE A REPLY

Please enter your comment!
Please enter your name here