ಕಾರ್ಕಳ ವೆಂಕಟರಮಣ ದೇವಸ್ಥಾನದಲ್ಲಿ ಲಕ್ಷದೀಪೋತ್ಸವ : ವಾಹನ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ

0
144

ಉಡುಪಿ: ಕಾರ್ಕಳ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಲಕ್ಷ ದೀಪೋತ್ಸವ ಪ್ರಯುಕ್ತ ನವೆಂಬರ್ 9 ರಿಂದ 11 ರ ವರೆಗೆ ಹಲವು ಕಾರ್ಯಕ್ರಮಗಳು ನಡೆಯಲಿರುವ ಹಿನ್ನೆಲೆ, ಸದರಿ ದಿನಗಳಂದು ಕಾರ್ಕಳ ಮೂರು ಮಾರ್ಗ ಜಂಕ್ಷನ್ ನಿಂದ ಸ್ಟೇಟ್ ಬ್ಯಾಂಕ್ ಜಂಕ್ಷನ್‌ವರೆಗೆ ಈ ಕೆಳಗಿನಂತೆ ತಾತ್ಕಾಲಿಕ ಪರ್ಯಾಯ ಸಂಚಾರ ವ್ಯವಸ್ಥೆ ಕಲ್ಪಿಸಿ, ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಆದೇಶ ಹೊರಡಿಸಿರುತ್ತಾರೆ.

ನ. 9 ರಂದು ಬಂಡಿಯಲ್ಲಿ ಗರುಡ ವಾಹನ ಉತ್ಸವ, ಕೆರೆದೀಪ ಪ್ರಯುಕ್ತ ಅಂದು ಸಂಜೆ 6 ಗಂಟೆಯಿಂದ ರಾತ್ರಿ 11 ರ ವರೆಗೆ ಘನವಾಹನಗಳು ಬಂಗ್ಲೆಗುಡ್ಡೆಯಿಂದ ಪುಲ್ಕೇರಿ ಮಾರ್ಗವಾಗಿ ಸಂಚರಿಸಬೇಕು. ಕಾರ್ಕಳದಿಂದ ಜೋಡುರಸ್ತೆ ಕಡೆಗೆ ಹಾಗೂ ಜೋಡುರಸ್ತೆಯಿಂದ ಕಾರ್ಕಳ ಕಡೆಗೆ ಸಂಚರಿಸುವ ಬಸ್‌ಗಳು ತಾಲೂಕು ಜಂಕ್ಷನ್‌ನಿಂದ ಕಲ್ಲೊಟ್ಟೆ, ಮಾರ್ಕೇಟ್ ಮಾರ್ಗವಾಗಿ ಬಸ್‌ನಿಲ್ದಾಣ ಪ್ರವೇಶಿಸಬೇಕು ಹಾಗೂ ಸ್ಟೇಟ್ ಬ್ಯಾಂಕ್ ಜಂಕ್ಷನ್‌ನಿಂದ ಗಾಂಧಿ ಮೈದಾನವಾಗಿ ಕಾಮಧೇನು ಹೋಟೆಲ್ ಜಂಕ್ಷನ್‌ವರೆಗಿನ ಮಾರ್ಗದಲ್ಲಿ ದ್ವಿ-ಚಕ್ರ ಹಾಗೂ ಲಘು ವಾಹನಗಳು ಸಂಚರಿಸಬೇಕು.

ನ. 10 ರಂದು ಲಕ್ಷದೀಪೋತ್ಸವ, ವನಭೋಜನ ಉತ್ಸವ ಇರುವುದರಿಂದ ಅಂದು ಬೆಳಗ್ಗೆ 10 ರಿಂದ ಮರುದಿನ ಬೆಳಗ್ಗೆ 6 ಗಂಟೆಯವರೆಗೆ ಹಾಗೂ ನ. 11 ರಂದು ಓಕುಳಿ ಹಾಗೂ ಪಲ್ಲಕ್ಕಿ ಉತ್ಸವ ಇರುವುದರಿಂದ ಅಂದು ಸಂಜೆ 4 ಗಂಟೆಯಿಂದ ಮರುದಿನ ಬೆಳಗ್ಗೆ 4 ಗಂಟೆಯವರೆಗೆ ಘನವಾಹನಗಳು ಬಂಗ್ಲೆಗುಡ್ಡೆಯಿಂದ ಹಿರಿಯಂಗಡಿ, ಪುಲ್ಕೇರಿ ಮಾರ್ಗವಾಗಿ ಸಂಚರಿಸಬೇಕು. ಬಸ್‌ಗಳು ಕಾರ್ಕಳದಿಂದ ಜೋಡುರಸ್ತೆ ಕಡೆಗೆ ಹಾಗೂ ಜೋಡುರಸ್ತೆಯಿಂದ ಕಾರ್ಕಳ ಕಡೆಗೆ ಸಂಚರಿಸುವ ಬಸ್‌ಗಳು ತಾಲೂಕು ಜಂಕ್ಷನ್‌ನಿಂದ ಕಲ್ಲೊಟ್ಟೆ, ಮಾರ್ಕೇಟ್ ಮಾರ್ಗವಾಗಿ ಬಸ್ ನಿಲ್ದಾಣ ಪ್ರವೇಶಿಸಬೇಕು. ಸ್ಟೇಟ್ ಬ್ಯಾಂಕ್ ಜಂಕ್ಷನ್‌ನಿಂದ ಗಾಂಧಿ ಮೈದಾನವಾಗಿ ಕಾಮಧೇನು ಹೋಟೆಲ್ ಜಂಕ್ಷನ್‌ವರೆಗಿನ ಮಾರ್ಗದಲ್ಲಿ ದ್ವಿಚಕ್ರ ಹಾಗೂ ಲಘು ವಾಹನಗಳು ಸಂಚರಿಸಬೇಕು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here