ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ ) ಮೂಡುಬಿದ್ರಿ ತಾಲೂಕಿನ ವತಿಯಿಂದ ಪೂಜ್ಯರ ಹುಟ್ಟುಹಬ್ಬದ ಅಂಗವಾಗಿ ಸ್ಫೂರ್ತಿ ಭಿನ್ನ ಸಾಮರ್ಥ್ಯ ಹಾಗೂ ತರಬೇತಿ ಕೇಂದ್ರದ 91 ಮಕ್ಕಳಿಗೆ ಆಹಾರ ಸಾಮಗ್ರಿ ವಿತರಣೆ ಹಾಗೂ ಹಣ್ಣು ಹಂಪಲು ವಿತರಣೆ ಯನ್ನು ತಾಲೂಕಿನ ಯೋಜನಾಧಿಕಾರಿಯವರು ಹಾಗೂ ತಾಲೂಕಿನ ಸಿಬ್ಬಂದಿ ವರ್ಗ ದವರು ಸೇರಿ ವಿತರಣೆ ಮಾಡಿ ಮಕ್ಕಳಿಗೆ ಶುಭ ಹಾರೈಕೆ ಮಾಡಲಾಯ್ತು. ಮಕ್ಕಳು ಪೂಜ್ಯರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಹೇಳಿದರು.. ಈ ಸಂದರ್ಭದಲ್ಲಿ ಸಂಸ್ಥೆ ಯ ಸ್ಥಾಪಕ ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿಗಾರ್, ಸಂಸ್ಥೆ ಯ ಪ್ರಿನ್ಸಿಪಾಲ ರಾದ ಶರ್ಮಿಳಾ ವಾಸು, ಸಹಾಯಕ ಆಡಳಿತ ಅಧಿಕಾರಿಯವರಾದ ಅನಿತಾ ರೋಡ್ರಗಸ್, ಒಕ್ಕೂಟದ ಅಧ್ಯಕ್ಷರಾದ ಸಂತೋಷ್, ಯೋಜನಾ ಧಿಕಾರಿಯವರಾದ ಧನಂಜಯ ಸರ್ ರವರು ಉಪಸ್ಥಿತರಿದ್ದರು.

