ಮೋದಿ ಭೇಟಿ ಹಿನ್ನಲೆ: ನಗರದಲ್ಲಿ ವಾಹನ ಸಂಚಾರದಲ್ಲಿ ಬದಲಾವಣೆ

0
114
The Governor of Nagaland, Shri R.N. Ravi calling on the Prime Minister, Shri Narendra Modi, in New Delhi on August 08, 2019.

ಉಡುಪಿ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಶ್ರೀ ಕೃಷ್ಣ ಮಠದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸುತ್ತಿರುವ ಹಿನ್ನಲೆಯಲ್ಲಿ ನವೆಂಬರ್ 28 ರಂದು ಬೆಳಿಗ್ಗೆ 9.00 ಗಂಟೆಯಿಂದ ಅಪರಾಹ್ನ 03.00 ಗಂಟೆಯವರೆಗೆ ಈ ಕೆಳಕಂಡಂತೆ ಮಾರ್ಗ ಬದಲಾವಣೆ ಮತ್ತು ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆದೇಶ ಹೊರಡಿಸಿದ್ದಾರೆ.

ಆದಿ ಉಡುಪಿ ಹೆಲಿಪ್ಯಾಡ್ ನಿಂದ ಕರಾವಳಿ ಜಂಕ್ಷನ್-ಬನ್ನಂಜೆ-ಶಿರಿಬೀಡು-ಕಲ್ಸಂಕ-ಶ್ರೀ ಕೃಷ್ಣ ಮಠದವರೆಗೆ ಯಾವುದೇ ವಾಹನಗಳ ಸಂಚಾರ ಮತ್ತು ಪಾರ್ಕಿಂಗ್ ನಿಷೇಧಿಸಿದೆ.
ಮಣಿಪಾಲದಿಂದ ಉಡುಪಿ ಕಡೆಗೆ ಬರುವ ಎಲ್ಲಾ ವಾಹನಗಳು ಶಾರದಾ ಕಲ್ಯಾಣ ಮಂಟಪ-ಬೀಡಿನಗುಡ್ಡೆ ಮಾರ್ಗವಾಗಿ ಉಡುಪಿಗೆ ಬರುವುದು.
ಕುಂದಾಪುರದಿಂದ ಉಡುಪಿ ಕಡೆಗೆ ಬರುವ ವಾಹನಗಳು ಕರಾವಳಿ ಫೈ ಓವರ್- ಅಂಬಲಪಾಡಿ -ಬ್ರಹ್ಮಗಿರಿ- ಜೋಡುಕಟ್ಟೆ ಮಾರ್ಗವಾಗಿ ಉಡುಪಿಗೆ ಬರುವುದು.
ಮಂಗಳೂರಿನಿಂದ ಉಡುಪಿ ಕಡೆಗೆ ಬರುವ ವಾಹನಗಳು ಕಿನ್ನಿಮುಲ್ಕಿ ಸ್ವಾಗತಗೋಪುರ-ಜೋಡುಕಟ್ಟೆ- ಮಾರ್ಗವಾಗಿ ಉಡುಪಿಗೆ ಬರುವುದು.
ಅಂಬಾಗಿಲಿನಿಂದ ಗುಂಡಿಬೈಲ್ ಮಾರ್ಗವಾಗಿ ಉಡುಪಿಗೆ ಬರುವ ಎಲ್ಲಾ ವಾಹನಗಳು ಗುಂಡಿಬೈಲ್ ರಸಿಕಾ ಬಾರ್ ಎಡಕ್ಕೆ ತಿರುಗಿ ದೊಡ್ಡಣಗುಡ್ಡೆ-ಎಂಜಿಎಂ-ಎಸ್ಕೆಎಂ-ಬೀಡಿನಗುಡ್ಡೆ ಮೂಲಕ ಉಡುಪಿಗೆ ಬರುವುದು.
ಮಲ್ಪೆಯಿಂದ ಬರುವ ಎಲ್ಲಾ ವಾಹನಗಳು ಕುತ್ಪಾಡಿ ಮಾರ್ಗವಾಗಿ ಅಂಬಲಪಾಡಿ ಮುಖೇನಾ ಉಡುಪಿಗೆ ಬರಬೇಕು

LEAVE A REPLY

Please enter your comment!
Please enter your name here