ಶಾಲಾ ಶತಮಾನೋತ್ಸವ ಸಂಭ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

0
65

ಶತಮಾನ ಕಂಡ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ

ಧರ್ಮಸ್ಥಳ, ದಿ. ಡಿ.11 : ಶ್ರೀ ಕ್ಷೇತ್ರ ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ವೀ ಹೆಗ್ಗಡೆಯವರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಉಜಿರೆ ಇದರ ಶಾಲಾ ಶತಮಾನೋತ್ಸವ ಸಂಭ್ರಮದ ಆಮಂತ್ರಣ ಪತ್ರಿಕೆಯನ್ನು  ಶ್ರೀ ಕ್ಷೇತ್ರದಲ್ಲಿ ಬಿಡುಗಡೆಗೊಳಿಸಿ ಶುಭಕೋರಿದರು.

ಈ ಸಂದರ್ಭದಲ್ಲಿ ಶಾಲಾ ಶತಮಾನೋತ್ಸವ ಸಮಿತಿ ಅಧ್ಯಕ್ಷರಾದ ಶರತ್‌ ಕೃಷ್ಣ ಪಡುಟ್ನಾಯ, ಶ್ರೀ.ಧ.ಮಂ.ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್, ಶಮಾನೋತ್ಸವ ಸಮಿತಿಯ ಶಾಲಾ ಕಾರ್ಯದರ್ಶಿಗಳಾದ ಅಬೂಬಕ್ಕರ್, ಕೋಶಾಧಿಕಾರಿ ಮೋಹನ್ ಶೆಟ್ಟಿಗಾರ್, ಕಾರ್ಯಕ್ರಮ ಸಂಯೋಜಕರಾದ ಬಿ.ಸೋಮಶೇಖ‌ರ್ ಶೆಟ್ಟಿ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಧನ್ಯಕುಮಾ‌ರ್, ವಿದ್ಯಾರ್ಥಿ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ಅಬೂಬಕ್ಕರ್, ಉಪಾಧ್ಯಕ್ಷರಾದ ಶ್ರೀಮತಿ ಪ್ರತಿಮಾ, ದಿಶಾ ಫುಡ್ ಕಾರ್ನರ್ ಮಾಲೀಕರಾದ ಅರುಣ್‌ ಕುಮಾರ್, ನಿವೃತ್ತ ಬ್ಯಾಂಕ್‌ ಮ್ಯಾನೇಜ‌ರ್ ರವೀಂದ್ರ ಶೆಟ್ಟಿ, ಶಾಲಾ ಮುಖ್ಯೋಪಾಧ್ಯಾಯರಾದ ಬಾಲಕೃಷ್ಣ ನಾಯ್ಕ ಪಿ ಮತ್ತು ಶಾಲಾ ಶಿಕ್ಷಕರು ಉಪಸ್ಥಿತರಿದ್ದರು .

ಶಾಲಾ ಶತಮಾನೋತ್ಸವ ಸಂಭ್ರಮದ ತಿಂಗಳವಾರು ಆಚರಿಸಿದ ವಿವಿಧ ಕಾರ್ಯಕ್ರಮಗಳು :

1. ಕಾನೂನು ಮಾಹಿತಿ ಮತ್ತು ‘ವರ್ಲ್ಡ್ ಡೇ ಆಫ್ ಸೋಶಿಯಲ್ ಜಸ್ಟಿಸ್’ ಕಾರ್ಯಕ್ರಮ .

2. ಉಚಿತ ನೇತ್ರ ಮತ್ತು ದಂತ ತಪಾಸಣಾ ಶಿಬಿರ .

3. ಉಚಿತ ಶ್ರವಣ ತಪಾಸಣಾ ಶಿಬಿರ .

4. ರಕ್ತದಾನ ಶಿಬಿರ .

5. ಶಾಲಾ ಸಂಸ್ಥಾಪನಾ ದಿನಾಚರಣೆ ಮತ್ತು ನೂತನ ಚಿಣ್ಣರ ಆಟದ ಮನೆಯ ಉದ್ಘಾಟನೆ .

6. ವನಮಹೋತ್ಸವ ಕಾರ್ಯಕ್ರಮ .

7. ಶಾಲಾ ವಿದ್ಯಾರ್ಥಿ/ ವಿದ್ಯಾರ್ಥಿನಿಯರಿಗೆ ಉಚಿತ ಸಮವಸ್ತ್ರ ವಿತರಣೆ .

8. ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ .

9. ಹಿರಿಯ ವಿದ್ಯಾರ್ಥಿಗಳ ಮತ್ತು ಪೋಷಕರ ಕ್ರೀಡಾಕೂಟ .

10. ಶಾಲೆಗೆ ನವೀಕೃತ ಗ್ರಂಥಾಲಯದ ಕೊಡುಗೆ .

11. ನಿವೃತ್ತ ಶಿಕ್ಷಕರಿಗೆ ಸನ್ಮಾನ .

LEAVE A REPLY

Please enter your comment!
Please enter your name here