ರಫ್ತು ಅವಕಾಶಗಳು ಹಾಗೂ ಉತ್ತಮ ಕೃಷಿ ಪದ್ಧತಿಯ ಸಂವೇದನಾ ಕಾರ್ಯಕ್ರಮ

0
41


ವರದಿ ರಾಯಿ ರಾಜ ಕುಮಾರ
ಕೃಷಿ ಮತ್ತು ಸಂಸ್ಕರಿತ ಆಹಾರ ಉತ್ಪನ್ನಗಳ ರಫ್ತು ಅಭಿವೃದ್ಧಿ ಪ್ರಾಧಿಕಾರ, ಕೃಷಿ ವಿಜ್ಞಾನ ಕೇಂದ್ರ ಕಂಕನಾಡಿ, ತೋಟಗಾರಿಕಾ ಇಲಾಖೆ ಮಂಗಳೂರು, ರೈತ ಜನ್ಯ ಫಾರ್ಮರ್ ಪ್ರೊಡ್ಯೂಸರ್ ಕಂಪನಿ, ಕೃಷಿ ವಿಚಾರ ವಿನಿಮಯ ಕೇಂದ್ರದ ಜಂಟಿ ಸಹಭಾಗಿತ್ವದಲ್ಲಿ ಡಿಸೆಂಬರ 17ರಂದು ಸಮಾಜ ಮಂದಿರದಲ್ಲಿ ರಫ್ತು ಅವಕಾಶಗಳು ಹಾಗೂ ಉತ್ತಮ ಕೃಷಿ ಪದ್ಧತಿ, ಸಂವೇದನಾ ಕಾರ್ಯಕ್ರಮ ನಡೆಯಿತು. ಅಡಿಕೆ ಬೆಳೆಯಲ್ಲಿ ಉತ್ತಮ ಕೃಷಿ ಪದ್ಧತಿ, ಬೆಳೆಗಾರರನ್ನು ಬಾಧಿಸುತ್ತಿರುವ ತೊಂದರೆಗಳ ನಿರ್ವಹಣೆ, ಕುರಿತು ಕೃಷಿ ಮತ್ತು ಸಂಸ್ಕರಿತ ಆಹಾರ ಉತ್ಪನ್ನಗಳ ರಫ್ತು ಅಭಿವೃದ್ಧಿ ಪ್ರಾಧಿಕಾರ(ಅಪೇಡಾ)ದ ಎ.ಜಿ.ಎಮ್. ಧರ್ಮ ರಾವ್ ದೀಪ ಬೆಳಗಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಅಪೇಡಾ ದ ಡಾ. ಪೂಜಾ, ಕೃಷಿ ವಿಜ್ಞಾನ ಕೇಂದ್ರದ ಡಾ. ರಶ್ಮಿ , ಅಪೇಡಾ ದ ಕಾರಂತ್ ಬಿ., ಪ್ರಾತ್ಯಕ್ಷಿಕೆ ಮೂಲಕ ಮಾಹಿತಿಗಳನ್ನು ಒದಗಿಸಿದರು. ರೈತರೊಂದಿಗೆ ಮುಖಾಮುಖಿ ಚರ್ಚೆಯು ನಡೆಯಿತು. ತೋಟಗಾರಿಕಾ ಇಲಾಖೆಯ ಅಧಿಕಾರಿಗಳು ಈ ಚರ್ಚೆಯಲ್ಲಿ ಭಾಗವಹಿಸಿ ಸಾಕಷ್ಟು ಮಾಹಿತಿಯನ್ನು ಒದಗಿಸಿದರು. ಸಸ್ಯ ಸಂರಕ್ಷಣೆಯ ಬಗ್ಗೆ ಡಾಕ್ಟರ್ ಕೇದಾರನಾಥ್, ವಿಟ್ಲ ಸಿಪಿಸಿಆರ್ ಐ ನ ಡಾ. ಭವಿಷ್ಯ ಹಲವಾರು ಪ್ರಶ್ನೆಗಳಿಗೆ ಉತ್ತರಿಸಿದರು.
ವೇದಿಕೆಯಲ್ಲಿ ಕೃಷಿ ವಿಚಾರ ವಿನಿಮಯ ಕೇಂದ್ರದ ಅಜಯ್ ಕುಮಾರ್, ರೈತಜನ್ಯ ಕಂಪೆನಿಯ ಲಿಯೋ ವಾಲ್ಟರ್ ನಜರತ್, ಹಾಜರಿದ್ದರು. ಕಂಕನಾಡಿ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಡಿ ಜೆ ರಮೇಶ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ಕೆ ಪ್ರವೀಣ್ ಕಾರ್ಯಕ್ರಮ ನಿರ್ವಹಿಸಿದರು. ಸಂದೀಪ್ ಪೂಜಾರಿ ಕಾರ್ಯಕ್ರಮ ಸಂಘಟಿಸಿದ್ದರು.

LEAVE A REPLY

Please enter your comment!
Please enter your name here