ಉಡುಪಿ : ಮೊದಲ ಬಾರಿಗೆ ಪರ್ಯಾಯ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದೇನೆ. ಸಿಂಗಾರಗೊಂಡ ನಗರ, ಪರ್ಯಾಯದ ಸಿದ್ಧತೆಗಳು ಅತ್ಯಂತ ವ್ಯವಸ್ಥಿತವಾಗಿ ನಡೆಯುತ್ತಿರುವುದು ಸಂತೋಷವಾಗಿದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಹೇಳಿದರು.
ಕೋರ್ಟ್ ರಸ್ತೆಯ ಕೆನರಾ ಬ್ಯಾಂಕ್ ಮುಂಭಾಗದಲ್ಲಿ ಶೀರೂರು ಪರ್ಯಾಯ ಹಿನ್ನೆಲೆಯಲ್ಲಿ ವಿದ್ಯುತ್ ದೀಪಾಲಂಕಾರ ಉದ್ಘಾಟಿಸಿ ಮಾತನಾಡಿದರು.
ಸ್ವಾಗತ ಸಮಿತಿ ಅಧ್ಯಕ್ಷ ಶಾಸಕ ಯಶ್ ಪಾಲ್ ಸುವರ್ಣ ಮಾತನಾಡಿ, ಪರ್ಯಾಯ ಕಾರ್ಯಕ್ರಮಕ್ಕೆ ಹೆಚ್ವಿನ ಮೆರುಗು ನೀಡಲು ಈ ಬಾರಿ ವಿಶೇಷ ವಿದ್ಯುದ್ದೀಪಾಲಂಕಾರ ಮಾಡಲಾಗಿದೆ. ನಗರ ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಇದರ ಮೆರುಗು ಹೆಚ್ಚಿಸಲು ಈ ಬಾರಿ ಉಡುಪಿ ನಗರಸಭೆ ಅನುದಾನದೊಂದಿಗೆ 50ಲಕ್ಷ ರೂಪಾಯಿ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ ಎಂದರು.
ಕೆನರಾಬ್ಯಾಂಕ್ ಜಿ.ಎಂ ಗಂಗಾಧರ್, ನಗರಸಭೆ ಆಯುಕ್ತ ಮಹಾಂತೇಶ್, ನಗರ ಸಭೆ ನಿಕಟಪೂರ್ವ ಅಧ್ಯಕ್ಷ ಪ್ರಭಾಕರ್ ಪೂಜಾರಿ, ರಜನಿ ಹೆಬ್ಬಾರ್, ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ ಶೆಟ್ಟಿ ಕುತ್ಯಾರ್, ಸ್ವಾಗತ ಸಮಿತಿ ಪ್ರಧಾನ ಕಾರ್ಯದರ್ಶಿ ಮಟ್ಟಾರ್ ರತ್ನಾಕರ್ ಹೆಗ್ಡೆ, ಮಹಿಳಾ ಘಟಕದ ಪದ್ಮಲತಾ, ನಗರಸಭಾ ಸದಸ್ಯ ಬಾಲಕೃಷ್ಣ್ಣ ಶೆಟ್ಟಿ, ಪ್ರಚಾರ ಸಮಿತಿ ಸಂಚಾಲಕ ನಂದನ್ ಜೈನ್ , ವಿಷ್ಣು ಮೂರ್ತಿ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು.

