ಬಂಟ್ವಾಳ : ತಾಲೂಕಿನ ಆಲದಪದವು ಅಕ್ಷರ ಭಾರತಿ ವಿದ್ಯಾಲಯದ ವಾರ್ಷಿಕೋತ್ಸವ ಸಮಾರಂಭ ‘ಅಕ್ಷರ ಉತ್ಸವ’ದಲ್ಲಿ ಪತ್ರಕರ್ತ, ರಂಗನಿರ್ದೇಶಕ ಗೋಪಾಲ ಅಂಚನ್ ಅವರ ಸಾಮಾಜಿಕ-ಶೈಕ್ಷಣಿಕ-ಸಾಂಸ್ಕೃತಿಕ-ಸಾಹಿತ್ಯಿಕ ಸೇವೆಯನ್ನು ಗೌರವಿಸಿ ಸನ್ಮಾನಿಸಲಾಯಿತು.
ಸಮಾರಂಭದಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ, ಶಾಲಾ ಸಂಚಾಲಕ ಮೋಹನ್ ರೈ.ಕೆ., ಜಿ.ಪಂ. ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ, ಉದ್ಯಮಿ ಟಿ.ಹರೀಂದ್ರ ವೈ. ಪ್ರಗತಿಪರ ಕೃಷಿಕ ಅಮ್ಮು ರೈ ಹರ್ಕಾಡಿ, ಉದ್ಯಮಿ ಪ್ರೀತಮ್ ಶೆಟ್ಟಿ ದಂಡೆಗೋಳಿ, ಶ್ರೀ ಕಾರೀಂಜೇಶ್ವರ ಭಜನಾ ಮಂಡಳಿಯ ಅಧ್ಯಕ್ಷ ಗೋಪಾಲ ಶೆಟ್ಟಿ ಪೋಷಕ ಸಂಘದ ಅಧ್ಯಕ್ಷ ಅರುಣ್ ಐತಾಳ್, ಶ್ರೀ ಹರಿ ಎಜುಕೇಶನ್ ಟ್ರಸ್ಟ್ ಕಾರ್ಯದರ್ಶಿ ಭಾರತಿ ಎಸ್.ರೈ, ಶಾಲಾ ನಾಯಕಿ ಧನ್ವಿ ಶೆಟ್ಟಿ ಮುಖ್ಯ ಶಿಕ್ಷಕ ಮೋಹನ್ ಎಚ್. ಮೊದಲಾದವರು ಉಪಸ್ಥಿತರಿದ್ದರು.
