
ಪಾಲಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಡಂದಲೆ ವಿದ್ಯಾಗಿರಿ ಪ್ರಾಥಮಿಕ ಶಾಲೆಯ ಬಳಿ ಅರಣ್ಯ ಇಲಾಖೆಗೆ ಸಂಬಂಧ ಪಟ್ಟ ಕಾಡಿಗೆ ಆಕಸ್ಮಿಕ ಬೆಂಕಿ ಹೊತ್ತಿ ಊರಿದ ಪರಿಣಾಮ ಅನೇಕ ಮರ ಗಿಡಗಳು ಬೆಂಕಿಗೆ ಆಹುತಿಯಾಗಿದೆ.

ಸ್ಥಳೀಯ ಮೆಸ್ಕಾಂ ಸಿಬ್ಬಂದಿ ಸಂಜಯ್ ಅಗ್ನಿ ಶಾಮಕ ದಳಕ್ಕೆ ಮಾಹಿತಿ ನೀಡಿದ್ದು ಬೆಂಕಿ ನಂದಿಸುವಲ್ಲಿ ಅಗ್ನಿ ಶಾಮಕದವರು ಸಫಲರಾಗಿದ್ದಾರೆ. ಬೆಂಕಿ ನಂದಿಸುವ ಕಾರ್ಯದಲ್ಲಿ ಮೆಸ್ಕಾಂ ಸಿಬ್ಬಂದಿ ಸಂಜಯ್ ಹಾಗೂ ಸುರೇಶ್ ಉಪಸ್ಥಿತರಿದ್ದರು.

ವರದಿ :ಜಗದೀಶ್ ಪೂಜಾರಿ ಕಡಂದಲೆ

