ಶಿವಾಜಿ ಭಾವಚಿತ್ರ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ: 8 ಆರೋಪಿಗಳ ಬಂಧನ!

0
16

ಬಾಗಲಕೋಟೆ: ನಗರದಲ್ಲಿ ಶಿವಾಜಿ ಜಯಂತಿ ಭಾವಚಿತ್ರ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ್​ ಗೋಯಲ್ ಪ್ರತಿಕ್ರಿಯೆ ನೀಡಿದ್ದು, ಘಟನೆಯ ಕುರಿತ ಎಲ್ಲಾ ಮಾಹಿತಿಯನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಬುಧವಾರ ಸಂಜೆ ನಡೆದ ಈ ಘಟನೆಯ ಹಿನ್ನೆಲೆ 8 ಆರೋಪಿಗಳನ್ನು ಪೊಲೀಸರು ಈಗಾಗಲೇ ಬಂಧಿಸಿದ್ದು, ತನಿಖೆ ನಡೆಸಿದ್ದಾರೆ. ಈ ವೇಳೆ ಹೊರಬಂದ ಸತ್ಯವನ್ನು ಎಸ್ಪಿ ಮಾಧ್ಯಮದ ಮುಂದಿಟ್ಟಿದ್ದಾರೆ.

ಶಿವಾಜಿ ಜಯಂತಿಯ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆಸಿದ್ದ ನವನಗರ ನಿವಾಸಿ ತನ್ವೀರ್ ಬಂಧಿಸಲಾಗಿದ್ದು, ಸುಮೋಟೋ ಕೇಸ್​​​ ದಾಖಲಿಸಿಕೊಂಡು FIR ಮಾಡಿದ್ದೇವೆ ಎಂದು ಎಸ್ಪಿ ಸಿದ್ಧಾರ್ಥ್​ ಹೇಳಿಕೆ ನೀಡಿದ್ದಾರೆ. ಸಿಸಿಟಿವಿ ದೃಶ್ಯ ಪರಿಶೀಲಿಸಿ 8 ಆರೋಪಿಗಳನ್ನು ಬಂಧಿಸಲಾಗಿದ್ದು, ತನ್ವೀರ್​ನನ್ನು ಹೊರತುಪಡಿಸಿ ಬೇರೆ ಯಾರೂ ಕಲ್ಲು ತೂರಾಟ ಮಾಡಿಲ್ಲವೆಂದು ಆತನೇ ಒಪ್ಪಿಕೊಂಡಿರುವುದಾಗಿ ಎಸ್ಪಿ ಹೇಳಿದ್ದಾರೆ.

ಈ ಗಲಾಟೆ ಪೂರ್ವ ಯೋಜಿತವಾಗಿದ್ದಲ್ಲ ಮತ್ತು ಡಿಜೆ ವಿಚಾರಕ್ಕಾಗಿಯಾಗಿ ಕಲ್ಲು ತೂರಾಟ ನಡೆದಿಲ್ಲ. ರಾತ್ರಿ ಸುಮಾರು 10 ಗಂಟೆ 6 ನಿಮಿಷಕ್ಕೆ ಕಲ್ಲು ತೂರಾಟವಾಗಿದ್ದು, ಈ ವೇಳೆ ನನಗೆ ಮತ್ತು ಇಬ್ಬರು ಕಾನ್ಸ್​ಟೇಬಲ್​ಗಳಿಗೆ ಗಾಯಗಳಾಗಿವೆ ಎಂದು ಎಸ್ಪಿ ತಿಳಿಸಿದ್ದಾರೆ. ಕಲ್ಲು ತೂರಾಟದ ಜೊತೆ ಚಪ್ಪಲಿಯನ್ನು ಕೂಡ ಎಸೆಯಲಾಗಿದೆ. ಮಸೀದಿ ಒಳಗೆ ಕಲ್ಲಿನಿಂದ ಶೂ ರ್ಯಾಕ್ ಮಾಡಲಾಗಿತ್ತು. ಅದೇ ರ್ಯಾಕ್ನ ಕಲ್ಲು ತೆಗೆದುಕೊಂಡು ತೂರಾಟ ನಡೆಸಲಾಗಿದೆ. ಮಸೀದಿಯೊಳಗೆ ಯಾವುದೇ ರಾಡ್ ಆಗಲಿ ಬೇರೆ ಅಸ್ತ್ರವಾಗಲಿ ಇರಲಿಲ್ಲ. ಗಲಾಟೆ ಹಿನ್ನೆಲೆ ಬಿಎನ್​​ಎಸ್​​​​​​​ 163ರಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಬಾಗಲಕೋಟೆ ಎಸ್​​​ಪಿ ಸಿದ್ಧಾರ್ಥ ಗೋಯಲ್ ಹೇಳಿದ್ದಾರೆ.

ಘಟನೆಯ ವಿವರ

  • ಸಂಜೆ 5ಗಂಟೆ: ಕೊತ್ತಲೇಶ್ವರ ದೇವಸ್ಥಾನದಿಂದ ಶಿವಾಜಿ ಭಾವಚಿತ್ರ ಮೆರವಣಿಗೆ ಆರಂಭ.
  • 9.45: ವಲ್ಲಭಭಾಯಿ ವೃತ್ತ,ಬಸವೇಶ್ವರ ಮಾರ್ಗವಾಗಿ ಪಂಕಾ ಮಸೀದಿ ಬಳಿ ಮೆರವಣಿಗೆ ಆಗಮನ
  • 9.50: ಮಸೀದಿ ಪ್ರಾರ್ಥನೆಗೆ ಬಂದಿದ್ದವರಿಂದ ಸೌಂಡ್ ಬಗ್ಗೆ ತಕರಾರು. ಪ್ರಚೋಧನಾತ್ಮಕ ಮಾತು,ಸ್ಥಳದಲ್ಲಿ ಪೊಲೀಸರಿಂದ ಸಮಾಧಾನ ಯತ್ನ
  • 10 ಗಂಟೆಗೆ: ಕಲ್ಲು ತೂರಾಟ, ಎಸ್ ಪಿ ಸಿದ್ದಾರ್ಥ ಗೋಯೆಲ್ ಹಾಗೂ ಓರ್ವ ಕಾನ್ಸ್ಟೇಬಲ್, ಓರ್ವ ಹಿಂದು ಕಾರ್ಯಕರ್ತನಿಗೆ ಗಾಯ
  • 10.15ರಿಂದ: ಹಿಂದು ಕಾರ್ತಕರ್ತರ ಬೃಹತ್ ಪ್ರತಿಭಟನೆ. ತಡೆಯಲು ಬಂದ ಪೊಲೀಸರ ಜೊತೆ ವಾಗ್ವಾದ.ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ.
  • 11 ಗಂಟೆ: ಕೊತ್ತಲೇಶ್ವರ ದೇವಸ್ಥಾನದ ಎದುರು ಹಿಂದು ಮುಖಂಡರ ಪ್ರತಿಭಟನೆ.
  • 12 ಗಂಟೆ: ಎಲ್ಲರನ್ನು ಸ್ಥಳದಿಂದ ಕಳುಹಿಸಿದ ಪೊಲೀಸರು.
  • 12.25: ತರಕಾರಿ ಮಾರುಕಟ್ಟೆಯಲ್ಲಿನ ನಾಲ್ಕು ತಳ್ಳುಗಾಡಿಗಳಿಗೆ ಬೆಂಕಿ.ಪೊಲೀಸರಿಂದ ಬೆಂಕಿ ಶಮನ.
  • ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಪ್ರಕರಣದ ಹಿನ್ನೆಲೆ ಹಿಂದೂ ಮುಖಂಡರ ಸಭೆ ಆಯೋಜಿಸಲಾಗಿತ್ತು. ಸಭೆಯಲ್ಲಿ ಬಿಜೆಪಿ ರಾಜ್ಯಸಭಾ ಸದಸ್ಯ ನಾರಾಯಣಸಾ ಬಾಂಡಗೆ ಮಾತನಾಡಿ,ಯಾರು ಭಾಗಿಯಾಗಿದ್ದಾರೋ ಎಲ್ಲರನ್ನೂ ಬಂಧಿಸಬೇಕು. ನಾಲ್ಕು ಮಂದಿಯನ್ನು ಮಾತ್ರ ಬಂಧಿಸುವುದರಿಂದ ಸಾಲದು. ಪ್ರಕರಣದಲ್ಲಿ ಸಂಪೂರ್ಣವಾಗಿ ತನಿಖೆ ನಡೆಸಿ ಎಲ್ಲಾ ಆರೋಪಿಗಳನ್ನೂ ಕಾನೂನು ಮುಂದಿಡಬೇಕು ಎಂದು ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here