
ದಿನಾಂಕ : 10-03-2026 ರಂದು ವಿಧಾನ ಪರಿಷತ್ತಿನ ಶಾಸಕರಾದ ಐವನ್ ಡಿ ಸೋಜಾ ರವರು ಸದನದ ಶೂನ್ಯ ವೇಳೆಯಲ್ಲಿ ಮಂಗಳೂರು ನಗರದಲ್ಲಿ ಹೆಚ್ಚುತ್ತಿರುವ ಧಗೆಗೆ ಆಣೆಕಟ್ಟುಗಳಲ್ಲಿ ನೀರಿನ ಮಟ್ಟ ಇಳಿಕೆಗೆ ಬೇಸಗೆಯಲ್ಲಿ ನೀರಿನ ಸಮಸ್ಯೆ ಸಾಧ್ಯತೆ ಮುಂಜಾಗ್ರತೆಗೆ ಮಂಗಳೂರು ಮಹಾನಗರ ಪಾಲಿಕೆ ಅಣಿಯಾಗಲಿದೆ ಎಂದು ಮಾನ್ಯ ಸಭಾಪತಿಯವರ ಮೂಲಕ ಮಾನ್ಯ ನಗರಾಭಿವೃದ್ಧಿ ಸಚಿವರ ಗಮನ ಸೆಳೆದರು.

ಮಾನ್ಯ ನಗರಾಭಿವೃದ್ದಿ ಸಚಿವರು ಮಂಗಳೂರು ನಗರಕ್ಕೆ ನೀರಿನ ಕೊರತೆಯಾಗದಂತೆ ಮುಂಜಾಗ್ರತಾ ಕ್ರಮ ವಹಿಸುವುದಾಗಿ ಭರವಸೆ ನೀಡಿದ್ದಾರೆ.
