ಮಂಗಳೂರು: ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಈ ನಡುವೆ ಏ 14ರಂದು ಭಾನುವಾರ ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸಮಾವೇಶ ಆಯೋಜಿಸಲಾಗಿತ್ತು. ಆದರೆ, ಈಗ ಮೋದಿ ಅವರ ಕಾರ್ಯಕ್ರಮದಲ್ಲಿ ಬದಲಾವಣೆಗಳಾಗಿದ್ದು, ಸಮಾವೇಶ ರದ್ದಾಗಿದ್ದು, ರೋಡ್ ಶೋ ಮಾತ್ರ ಹಮ್ಮಿಕೊಳ್ಳಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಆಗಮನದೊಂದಿಗೆ ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಬೃಹತ್ ಚುನಾವಣಾ ಪ್ರಚಾರ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಾದರೆ ಕಾರ್ಯಕ್ರಮದಲ್ಲಿ ಬದಲಾವಣೆ ಆಗಿರುವುದರಿಂದ, ಸಂಜೆ ಐದು ಗಂಟೆಗೆ ರೋಡ್ ಶೋ ನಿಗದಿಯಾಗಿದೆ. ರಾಜ್ಯ ಸಮಿತಿಯ ನಿರ್ದೇಶನದಂತೆ ಈ ಬದಲಾವಣೆ ಮಾಡಲಾಗಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ತಿಳಿಸಿದ್ದಾರೆ. ನಾರಾಯಣ ಗುರು ವೃತ್ತದಿಂದ ರೋಡ್ ಶೋ ಆರಂಭಿಸಿ, ಪಿವಿಎಸ್, ನವಭಾರತ ಸರ್ಕಲ್ ಮಾರ್ಗವಾಗಿ ಹಂಪನಕಟ್ಟೆಯಲ್ಲಿ ಸಮಾಪ್ತಿಯಾಗಲಿದೆ. 2.5 ಕಿ ಮೀ ರೋಡ್ ಶೋ ಆಯೋಜಿಸಲಾಗಿದೆ. ಭದ್ರತಾ ದೃಷ್ಟಿಯಿಂದ ಕೊನೆಯ ಕ್ಷಣದಲ್ಲಿ ಬದಲಾವಣೆಗಳಾದರೂ ಆಗಬಹುದು. ಸಮಾವೇಶಕ್ಕೆ ಸೇರಲಿರುವಷ್ಟೇ ಜನರು ರೋಡ್ ಶೋನಲ್ಲೂ ಭಾಗಿಯಾಗಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಪ್ರಮುಖರಾದ ಜಗದೀಶ್ ಹಿರೇಮನಿ, ಜಗದೀಶ ಶೇಣವ, ಪ್ರೇಮಾನಂದ ಶೆಟ್ಟಿ, ಸುದರ್ಶನ ಎಂ, ನಿತಿನ್ ಕುಮಾರ್, ಕಸ್ತೂರಿ ಪಂಜ ಮುಂತಾದವರು ಉಪಸ್ಥಿತರಿದ್ದರು.
ಏ.14ರ ಪ್ರಧಾನಿ ಮೋದಿ ಮಂಗಳೂರು ಸಮಾವೇಶ ರದ್ದು: ರೋಡ್ ಶೋ ಆಯೋಜನೆ; ಎಲ್ಲಿಂದ ಎಲ್ಲಿವರೆಗೆ – ಇಲ್ಲಿದೆ ಸಂಪೂರ್ಣ ಮಾಹಿತಿ
RELATED ARTICLES