Tuesday, April 22, 2025
HomeUncategorizedಎ. 18: ವಿಶ್ವನಾಥ ದೊಡ್ಡನೆಯವರ ಹೊರನಾಡಿನಲ್ಲಿ ತುಳುವರು ಕೃತಿ ಬಿಡುಗಡೆ

ಎ. 18: ವಿಶ್ವನಾಥ ದೊಡ್ಡನೆಯವರ ಹೊರನಾಡಿನಲ್ಲಿ ತುಳುವರು ಕೃತಿ ಬಿಡುಗಡೆ

ಮುಂಬಯಿ: ಡಾ। ವಾಮನ್ ರಾವ್ ಬೇಕಲ್ ಸ್ಥಾಪಕ ಸಂಚಾಲ ಕತ್ವದ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿ ಷತ್‌ನ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಉದ್ಘಾಟನೆ ಮತ್ತು ಮುಂಬಯಿ ಲೇಖಕ ವಿಶ್ವನಾಥ ದೊಡ್ಡನೆಯವರ ಹೊರನಾಡಿನಲ್ಲಿ ತುಳುವರು ಕೃತಿ ಬಿಡುಗಡೆ ಸಮಾರಂ ಭವು ಎ. 18ರಂದು ಅಪರಾಹ್ನ 2ರಿಂದ ಕಿನ್ನಿಗೋಳಿಯ ಯುಗಪುರುಷ ಸಭಾಂಗಣದಲ್ಲಿ ನಡೆಯಲಿದೆ. ದ.ಕ. ಜಿಲ್ಲಾ ಕಸಾಪ ನಿಕಟಪೂರ್ವ ಅಧ್ಯಕ್ಷ ಪ್ರದೀಪ ಕುಮಾರ ಕಲ್ಕೂರ ಘಟಕವನ್ನು ಉದ್ಘಾಟಿಸಲಿದ್ದಾರೆ. ಇದೇ ಸಂದರ್ಭ ವಿಶ್ವನಾಥ ದೊಡ್ಡನೆ ಯವರ ಹೊರನಾಡಿನಲ್ಲಿ ತುಳುವರು ಕೃತಿಯನ್ನು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಜಯಾನಂದ ಪೆರಾಜೆ ಬಿಡುಗಡೆಗೊಳಿಸಲಿದ್ದಾರೆ. ಘಟಕದ ಅಧ್ಯಕ್ಷ ಡಾ| ಕೊಳ್ಳಪ್ಪೆ ಗೋವಿಂದ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಕಾಸರಗೋಡಿನ ಕನ್ನಡ ಭವನ ಕೇಂದ್ರ ಸಮಿತಿ ರಾಷ್ಟ್ರಕವಿ ಗೋವಿಂದ ಪೈ ರಾಷ್ಟ್ರೀಯ ಪ್ರಶಸ್ತಿ – 2025 ಅನ್ನು ಧರ್ಮದರ್ಶಿ ಡಾ| ಹರಿಕೃಷ್ಣ ಪುನ ರೂರು, ಪ್ರದೀಪ ಕುಮಾರ ಕಲ್ಕೂರ, ಕ್ಯಾ। ಗಣೇಶ ಕಾರ್ಣಿಕ್, ಶ್ರೀಪತಿ ಭಟ್ ಮೂಡುಬಿದಿರೆ, ಭುವನಾಭಿ ರಾಮ ಉಡುಪ ಅವರಿಗೆ ಪ್ರದಾನ ಮಾಡಲಾಗುವುದು.

ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್‌ನ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಆಶ್ರಯದಲ್ಲಿ ನಡೆದ ಚುಟುಕು ರಚನಾ ಸ್ಪರ್ಧೆಯ ವಿಜೇತರಾದ ನಿರ್ಮಲಾ ಸುರತ್ಕಲ್, ಗೀತಾ ಎನ್. ನರಿಕೊಂಬು, ಡಾ| ಸುಮತಿ ಪಿ., ಅಬ್ದುಲ್ ಸಮದ್ ಬಾವಾ ಹಾಗೂ ದಯಾವತಿ ಚರಂತಿಮಠ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಚುಟುಕು ಕಾವ್ಯ ಪ್ರಶಸ್ತಿ -2025 ನೀಡಿ ಗೌರವಿಸಲಾಗುವುದು. ಚುಟುಕು ಕವಿಗೋಷ್ಠಿಯಲ್ಲಿ 24 ಮಂದಿ ಕವಿಗಳು ಭಾಗವಹಿಸಲಿದ್ದಾರೆ ಎಂದು ಕಾಸರಗೋಡು ಕನ್ನಡ ಭವನ ಮತ್ತು ಗ್ರಂಥಾಲಯದ ಸ್ಥಾಪಕ ಅಧ್ಯಕ್ಷಡಾ| ವಾಮನ ರಾವ್ ಬೇಕಲ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular