ಸಂಡೂರು (ಬಳ್ಳಾರಿ): ತಾಲ್ಲೂಕಿನ ಚೋರನೂರು ಹೋಬಳಿಯ ಎಚ್.ಕೆ ಹಳ್ಳಿ ಗ್ರಾಮದಲ್ಲಿ ಮಂಜುನಾಥ ಮತ್ತು ಹುಲಿಗೆಮ್ಮ ದಂಪತಿಯ ಪುತ್ರ ಸಮರ್ಥ (2) ಸಾಂಬಾರ್ ಪಾತ್ರೆಯಲ್ಲಿ ಬಿದ್ದು ಮೃತಪಟ್ಟಿದ್ದಾನೆ.
‘ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸಾಂಬಾರು ಸಿದ್ಧಪಡಿಸಲಾಗಿತ್ತು. ಪಾತ್ರೆಯ ಪಕ್ಕದಲ್ಲೇ ಇಟ್ಟಿದ್ದ ಹಪ್ಪಳ ತೆಗೆದುಕೊಳ್ಳಲು ಬಂದ ಮಗು ಸಾಂಬಾರು ಪಾತ್ರೆಗೆ ಬಿದ್ದು ಗಾಯಗೊಂಡಿದ್ದ ಮಗುವನ್ನು ಆಸ್ಪತ್ರೆಗೆ ಕರೆದೊಯ್ದರೂ ಪ್ರಯೋಜನವಾಗಲಿಲ್ಲ. ಪೋಷಕರ ಕೋರಿಕೆ ಮೇರೆಗೆ ಪ್ರಕರಣ ದಾಖಲಿಸಿಕೊಂಡಿಲ್ಲ’ ಎಂದು ಪೊಲೀಸರು ತಿಳಿಸಿದ್ದಾರೆ.