ಪುತ್ತೂರು: ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವರ ಮತ್ತು ಸಪರಿವಾರ ದೇವರುಗಳ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವವು 21.04.2024 ರಿಂದ 28.04.2024 ರ ವರೆಗೆ ಕ್ಷೇತ್ರದ ತಂತ್ರಿ ಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ್ ತಂತ್ರಿಗಳ ನೇತೃತ್ವದಲ್ಲಿ ವಿಜೃಂಭಣೆಯಿಂದ ನಡೆಯಲಿದೆ. ವಿವಿಧ ತಾಂತ್ರಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ. ದಿನಾಂಕ 20.04.2024 ಶನಿವಾರ ಅಪರಾಹ್ನ 3 ಗಂಟೆಯಿಂದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರ ಮಾರು ಗದ್ದೆ ಇಂದ ವೈಭವದ ಹಸಿರು ಹೊರ ಕಾಣಿಕೆ ಮೆರವಣಿಗೆ ಆರ್ಯಾಪು ದೇವಾಲಯಕ್ಕೆ ಸೇರುತ್ತದೆ. ಪ್ರತಿ ದಿನ ಮಧ್ಯಾಹ್ನ 12 ರಿಂದ ವಿವಿಧ ಸಾಂಸ್ಕೃತಿ ಕಾರ್ಯಕ್ರಮಗಳು ನಡೆಯುತ್ತದೆ. ನಂತರ ಅನ್ನಸಂತರ್ಪಣೆ ನಡೆಯಲಿದೆ.