Wednesday, January 15, 2025
Homeಅಪಘಾತಚುನಾವಣಾ ಕರ್ತವ್ಯದಲ್ಲಿದ್ದ ಪೊಲೀಸರನ್ನು ಕರೆದೊಯ್ಯುತ್ತಿದ್ದ ಬಸ್​​​ ಪಲ್ಟಿ, 21 ಮಂದಿಗೆ ಗಾಯ

ಚುನಾವಣಾ ಕರ್ತವ್ಯದಲ್ಲಿದ್ದ ಪೊಲೀಸರನ್ನು ಕರೆದೊಯ್ಯುತ್ತಿದ್ದ ಬಸ್​​​ ಪಲ್ಟಿ, 21 ಮಂದಿಗೆ ಗಾಯ

ಬೇತುಲ್ : ಮಧ್ಯಪ್ರದೇಶದ ಬೇತುಲ್ ಜಿಲ್ಲೆಯಲ್ಲಿ ಇಂದು (ಏ.20) ಮುಂಜಾನೆ ಬಸ್ಸು ಪಲ್ಟಿಯಾದ ಪರಿಣಾಮ 21 ಪೊಲೀಸರು ಮತ್ತು ಗೃಹ ರಕ್ಷಕ ದಳದ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. ಗಾಯಗೊಂಡಿರುವ ಅಧಿಕಾರಿಗಳು ಚುನಾವಣಾ ಕರ್ತವ್ಯ ಮುಗಿಸಿ ರಾಜ್‌ಗಢಕ್ಕೆ ಹಿಂತಿರುಗುತ್ತಿದ್ದಾಗ ಭೋಪಾಲ್-ಬೇತುಲ್ ಹೆದ್ದಾರಿಯ ಬರೇತಾ ಘಾಟ್ ಬಳಿ ಈ ಅಪಘಾತ ನಡೆದಿದೆ.

ಮುಂಜಾನೆ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪೊಲೀಸ್ ಉಪ ವಿಭಾಗಾಧಿಕಾರಿ ಶಾಲಿನಿ ಪರಸ್ತೆ ತಿಳಿಸಿದ್ದಾರೆ. ಐವರು ಪೊಲೀಸರು ಮತ್ತು ಉಳಿದ ಗೃಹರಕ್ಷಕರು (ಹೋಮ್ ಗಾರ್ಡ್)​​​​​ ಸೇರಿದಂತೆ ಒಟ್ಟು 40 ಜನ ಗಾಯಗೊಂಡಿದ್ದಾರೆ. ಈ ಬಸ್​​​ ಛಿಂದ್ವಾ ಕ್ಷೇತ್ರದಿಂದ ಚುನಾವಣಾ ಕರ್ತವ್ಯ ಮುಗಿಸಿ ರಾಜ್‌ಗಢಕ್ಕೆ ಬರುತ್ತಿದ್ದಾಗ ಎದುರಿನಿಂದ ಬಂದ ಟ್ರಕ್​​ ತಪ್ಪಿಸಲು ಹೋಗಿ ಬಸ್​​​ ಪಲ್ಟಿಯಾಗಿದೆ ಎಂದು ಹೇಳಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಎಂಟು ಸಿಬ್ಬಂದಿಗೆ ಬೆತುಲ್‌ನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ಸಣ್ಣಪುಟ್ಟ ಗಾಯಗೊಂಡವರಿಗೆ ಶಾಹಪುರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular