ಕರ್ತವ್ಯ ಕೇಂದ್ರಿತ, ದೂರದರ್ಶಿತ್ವದ ಚಿಂತನೆಯ ಸರ್ವ ಸ್ಪರ್ಶಿ ಸರ್ವ ವ್ಯಾಪಿ ವಿಕಸಿತ ಬಜೆಟ್ : ಕುತ್ಯಾರು ನವೀನ್ ಶೆಟ್ಟಿ

0
34

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಕೇಂದ್ರ ಬಜೆಟ್ ಎಲ್ಲಾ ಆಯಾಮಗಳ ಅಭಿವೃದ್ಧಿಯ ಕರ್ತವ್ಯ ಕೇಂದ್ರಿತ, ದೂರದರ್ಶಿತ್ವದ ಚಿಂತನೆಯುಳ್ಳ ಸರ್ವ ಸ್ಪರ್ಶಿ ಸರ್ವ ವ್ಯಾಪಿ ವಿಕಸಿತ ಬಜೆಟ್ ಆಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ತಿಳಿಸಿದ್ದಾರೆ.

ವಿಶೇಷವಾಗಿ 2047ಕ್ಕೆ ‘ವಿಕಸಿತ ಭಾರತ’ ಗುರಿಯೊಂದಿಗೆ ಮುಂದುವರಿಯುತ್ತಿರುವ ದೇಶದ ಸಮಗ್ರ ಅಭಿವೃದ್ಧಿಗೆ ಅಡಿಪಾಯ ಹಾಕಿರುವ ಬಜೆಟ್ ಇದಾಗಿದೆ.

ಸಮರ್ಥನೀಯ ಆರ್ಥಿಕ ಪ್ರಗತಿಯೊಂದಿಗೆ ಜನರ ಆಕಾಂಕ್ಷೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ‘ಸಬ್ ಕಾ ಸಾಥ್ ಸಬ್ ಕಾ ವಿಕಾಸ್’ ತತ್ವದಡಿ ರೂಪಿಸಿರುವ ಜನಸ್ನೇಹಿ ಕೇಂದ್ರ ಬಜೆಟ್ ನಲ್ಲಿ ಜವಳಿ ಉದ್ಯಮ, ಔಷಧ ಉದ್ಯಮ, ಸಣ್ಣ ಉದ್ದಿಮೆದಾರರ ರಫ್ತುಗಳಿಗೆ ಹೆಚ್ಚಿನ ಪ್ರೋತ್ಸಾಹ, ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು, ಆದಾಯ ತೆರಿಗೆ ಸರಳೀಕೃತ ಪದ್ಧತಿ ಅಳವಡಿಕೆ, ಉದ್ಯೋಗ ಸೃಷ್ಟಿಯ ಜೊತೆಗೆ ಮೂಲ ಸೌಕರ್ಯ ವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ.

ಒಟ್ಟಾರೆಯಾಗಿ ದೇಶದ ಸಮಗ್ರ ಅಭಿವೃದ್ಧಿಗೆ ಪೂರಕವಾಗಿರುವ ‘ವಿಕಸಿತ ಭಾರತ ಬಜೆಟ್’ ಇದಾಗಿದೆ ಎಂದು ಕುತ್ಯಾರು ನವೀನ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here