Tuesday, May 20, 2025
Homeಉಡುಪಿಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ., ಉಡುಪಿಯ ಅರುಣ್ ಕುಮಾರ್ ಎಸ್.ವಿ ಇವರಿಗೆ ಗೌರವಾಭಿನಂದನಾ ಸಮಾರಂಭ

ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ., ಉಡುಪಿಯ ಅರುಣ್ ಕುಮಾರ್ ಎಸ್.ವಿ ಇವರಿಗೆ ಗೌರವಾಭಿನಂದನಾ ಸಮಾರಂಭ

ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ., ಉಡುಪಿ ಸಹಕಾರ ಸಂಘಗಳ ಸಹಾಯಕ ನಿಬಂಧಕರಾಗಿ ಸೇವಾ ನಿವೃತ್ತಿ ಹೊಂದಿದ ಅರುಣ್ ಕುಮಾರ್ ಎಸ್.ವಿ ಇವರಿಗೆ ಗೌರವಾಭಿನಂದನಾ ಸಮಾರಂಭ ದಿನಾಂಕ ೧೭-೦೭-೨೦೨೪ ಬುಧವಾರ ಉಡುಪಿ ಟೌನ್ ಹಾಲ್ (ಮಿನಿ ಹಾಲ್), ಅಜ್ಜರಕಾಡು ಇಲ್ಲಿ ನಡೆಯಿತು.

ಉಡುಪಿಯ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ವತಿಯಿಂದ ಸಹಕಾರ ಸಂಘಗಳ ಸಹಾಯಕ ನಿಬಂಧಕರಾಗಿ ಸೇವಾ ನಿವೃತ್ತಿ ಹೊಂದಿದ ಅರುಣ್ ಕುಮಾರ್ ಎಸ್.ವಿ ಇವರಿಗೆ ಗೌರವಾಭಿನಂದನೆ ಕಾರ್ಯಕ್ರಮವು ಉಡುಪಿ ಅಜ್ಜರಕಾಡು ಪುರಭವನ ಮಿನಿಹಾಲ್‌ನಲ್ಲಿ ಜರಗಿತು.
ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಕುಂದಾಪುರ ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಸುಕನ್ಯಾರವರು, ಕೆ.ಎಂ.ಎಫ್ ನಿರ್ದೇಶಕರು ಹಾಗೂ ಸಂಘದ ಪ್ಯಾನೆಲ್ ಸದಸ್ಯರೂ ಆದ ರವಿರಾಜ್ ಹೆಗ್ಡೆಯವರು ಭಾಗಿಯಾದರು. ಇದೇ ಸಂದರ್ಭದಲ್ಲಿ ಭಾರತ್ ಸ್ಕೌಟ್ಸ್ ಹಾಗೂ ಗೈಡ್ಸ್ ಜಿಲ್ಲಾ ಸಂಸ್ಥೆ ಉಡುಪಿಯ ಮುಖ್ಯ ಆಯುಕ್ತರಾಗಿ ನೇಮಕಗೊಂಡ ಸೊಸೈಟಿಯ ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿಯವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸಂಘದ ಆಡಳಿತ ಮಂಡಳಿ ಸದಸ್ಯರಾದ ಎಲ್. ಉಮಾನಾಥ, ಪುರುಷೋತ್ತಮ ಪಿ. ಶೆಟ್ಟಿ, ಸೈಯ್ಯದ್ ಅಬ್ದುಲ್ ರಜಾಕ್, ವಿನಯ ಕುಮಾರ್ ಟಿ.ಎ., ಮನೋಹರ ಎಸ್. ಶೆಟ್ಟಿ, ಸಾಧು ಸಾಲ್ಯಾನ್, ಸದಾಶಿವ ನಾಯ್ಕ್, ಜಯಾ ಶೆಟ್ಟಿ , ಗಾಯತ್ರಿ ಎಸ್. ಭಟ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಅಭಿನಂದನಾ ಕಾರ್ಯಕ್ರಮದ ಮುಂಚಿತವಾಗಿ ಸಂಘದ ಸಿಬ್ಬಂದಿಗಳಿಗೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿವೃತ್ತ ಎಂ.ಡಿ ವಿಶ್ವನಾಥ ನಾಯರ್ ಇವರಿಂದ ವ್ಯಕ್ತಿತ್ವ ವಿಕಸನ ಹಾಗೂ ಕೌಶಲ್ಯಾಭಿವೃದ್ಧಿ ಕುರಿತು ತರಬೇತಿ ಕಾರ್ಯಕ್ರಮ ನೆರವೇರಿತು.
ಸಂಘದ ಪ್ರಧಾನ ವ್ಯವಸ್ಥಾಪಕರಾದ ರಾಜೇಶ್ ವಿ. ಶೇರಿಗಾರ್ ಸ್ವಾಗತಿಸಿದರು. ಎ.ಜಿ.ಎಂ ಪ್ರವೀಣ್ ಕುಮಾರ್‌ರವರು ಅರುಣ್ ಕುಮಾರ್ ಎಸ್.ವಿ ಇವರ ಅಭಿನಂದನಾ ಭಾಷಣ ಮಾಡಿದರು. ಸಂಘದ ಮಲ್ಪೆ ಶಾಖಾ ವ್ಯವಸ್ಥಾಪಕರಾದ ನವೀನ್ ಕೆ ಕಾರ್ಯಕ್ರಮ ಕಾರ್ಯಕ್ರಮ ನಿರೂಪಿಸಿ ಉಪಾಧ್ಯಕ್ಷರಾದ ಜಾರ್ಜ್ ಸಾಮ್ಯುವೆಲ್ ವಂದಿಸಿದರು.

RELATED ARTICLES
- Advertisment -
Google search engine

Most Popular