ಮೂಡುಬಿದಿರೆ: ಸಾರ್ವಜನಿಕ ಶ್ರೀ ಶಾರದೋತ್ಸವ ಟ್ರಸ್ಟ್ ಬನ್ನಡ್ಕ (ರಿ.) ಇದರ ವತಿಯಿಂದ ನಾಲ್ಕನೇ ವರ್ಷದ ಬನ್ನಡ ಶಾರದೋತ್ಸವವು ಅ. 1 ಮತ್ತು 2ರಂದು ಶ್ರೀ ಕ್ಷೇತ್ರ ಬನ್ನಡ್ಕದಲ್ಲಿ ಜರಗಲಿದ್ದು, ಇದರ ಆಮಂತ್ರಣ ಪತ್ರಿಕೆಯು ನಾಳೆ (ಆ.೭) ಬಿಡುಗಡೆಗೊಳ್ಳಲಿದೆ.
ಕಾರ್ಯಕ್ರಮದಲ್ಲಿ ಬೆಳಿಗ್ಗೆ 11-00 ಗಂಟೆಗೆ ನಡೆಯುವ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅವರಿಗೆ ಬನ್ನಡ್ಕ ಶ್ರೀ ಶಾರದಾರತ್ನ ಪ್ರಶಸ್ತಿ-2025 ನೀಡಲಿದ್ದಾರೆ.

