Friday, May 16, 2025
Homeರಾಜ್ಯಹಬ್ಬ ಮುಗಿಸಿಕೊಂಡು ಬರುತ್ತಿದ್ದ ವೇಳೆ ಕಾರುಗಳು ಮುಖಾಮುಖಿ ಡಿಕ್ಕಿ; ಐವರು ದುರ್ಮರಣ

ಹಬ್ಬ ಮುಗಿಸಿಕೊಂಡು ಬರುತ್ತಿದ್ದ ವೇಳೆ ಕಾರುಗಳು ಮುಖಾಮುಖಿ ಡಿಕ್ಕಿ; ಐವರು ದುರ್ಮರಣ

ತುಮಕೂರು: ಗೌರಿ-ಗಣೇಶ ಹಬ್ಬ ಮುಗಿಸಿಕೊಂಡು ವಾಪಾಸ್‌ ಮನೆಗೆ ಹಿಂದಿರುಗುತ್ತಿದ್ದ ವೇಳೆ ಕಾರು ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸೇರಿ ಐವರು ಮೃತಪಟ್ಟಿದ್ದಾರೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕೆರೆಗಳಪಾಳ್ಯ ಹಾಗೂ ಕಾಟಗಾನಹಳ್ಳಿ ಬಳಿ ಘಟನೆ ನಡೆದಿದೆ. ಮೂವರು ಪುರುಷರು, ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಇನ್ನೊಬ್ಬ ಪುರುಷ ಮತ್ತು ಮಹಿಳೆ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಒಂದು ಕಾರಿನಲ್ಲಿ ಮೂವರು ಮತ್ತು ಇನ್ನೊಂದು ಕಾರಿನಲ್ಲಿ ಇಬ್ಬರು ಮೃತರಾಗಿದ್ದಾರೆ.
ತುಮಕೂರು ಕಡೆಯಿಂದ ಬರುತ್ತಿದ್ದ ಸಿಯಾಜ್‌ ಮಾರುತಿ ಕಾರು ಮತ್ತು ತುಮಕೂರು ಕಡೆಗೆ ಹೋಗುತ್ತಿದ್ದ ಟಾಟಾ ಟಿಯಾಗೊ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಅಧಿಕಾರಿಗಳು ಆಗಮಿಸಿ ಪರಿಶೀಲಿಸಿದ್ದಾರೆ. ಬೆಂಗಳೂರಿನ ಜೆಪಿ ನಗರದಲ್ಲಿ ವಾಸವಾಗಿದ್ದ ಯೋಗೇಶ್‌ ಎಂಬವರ ಕುಟುಂಬ ಊರಲ್ಲಿ ಹಬ್ಬ ಮುಗಿಸಿಕೊಂಡು, ವೈಎನ್‌ ಹೊಸಕೋಟೆಯಿಂದ ಬೆಂಗಳೂರಿಗೆ ಹೊರಟಿತ್ತು. ಡಿಕ್ಕಿಯಾದ ಎರಡೂ ಕಾರುಗಳು ಸಂಪೂರ್ಣ ಜಖಂಗೊಂಡಿವೆ.

RELATED ARTICLES
- Advertisment -
Google search engine

Most Popular