Saturday, May 24, 2025
Homeನಿಧನಸಕಲ ಗೌರವದೊಂದಿಗೆ ನಟ ದ್ವಾರಕೀಶ್ ಅಂತ್ಯ ಸಂಸ್ಕಾರ

ಸಕಲ ಗೌರವದೊಂದಿಗೆ ನಟ ದ್ವಾರಕೀಶ್ ಅಂತ್ಯ ಸಂಸ್ಕಾರ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ದ್ವಾರಕೀಶ್ ಅವರ ಅಂತ್ಯ ಸಂಸ್ಕಾರ ಬುಧವಾರ ನಡೆಯಿತು. ಸಕಲ ಸರ್ಕಾರಿ ಗೌರವದೊಂದಿಗೆ ಅವರ ಅಂತಿಮ ವಿಧಿ ವಿಧಾನಗಳು ನೆರವೇರಿದವು.
ಚಾಮರಾಜಪೇಟೆಯ ಟಿಆರ್ ಮಿಲ್ ನ ಹಿಂದೂ ರುದ್ರ ಭೂಮಿಯಲ್ಲಿ ಅಂತ್ಯಕ್ರಿಯೆ ನೆರವೇರಿತು. ದ್ವಾರಕೀಶ್ ಪುತ್ರರ ಸಮ್ಮುಖದಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಅಂತಿಮ ವಿಧಿ ವಿಧಾನಗಳು ನೆರವೇರಿದವು.
ಹಿರಿಯ ಪುತ್ರ ಸಂತೋಷ್ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು. ಈ ವೇಳೆ ಕುಟುಂಬದವರು, ಆಪ್ತರು, ಕನ್ನಡ ಚಿತ್ರರಂಗದ ಕಲಾವಿದರು ಉಪಸ್ಥಿತರಿದ್ದರು. ಅಂತಿಮ ಸಂಸ್ಕಾರಕ್ಕೂ ಮೊದಲು ಪೊಲೀಸರು ಮೂರು ಸುತ್ತು ಕುಶಾಲತೋಪು ಸಿಡಿಸಿ ಗೌರವ ಸಲ್ಲಿಸಲಾಯಿತು.ಚಿತ್ರರಂಗದ ಗಣ್ಯರು, ರಾಜಕೀಯ ಪ್ರಮುಖರು ಸಹಿತ ಅನೇಕ ಗಣ್ಯರು ದ್ವಾರಕೀಶ್ ಅಂತಿಮ ದರ್ಶನ ಪಡೆದರು.

RELATED ARTICLES
- Advertisment -
Google search engine

Most Popular