ಉಡುಪಿ : ಜಿಲ್ಲೆಯಲ್ಲಿ ಭ್ರಷ್ಟ ವ್ಯವಸ್ಥೆ ತಾಂಡವವಾಡುತ್ತಿದ್ದು, ಆಡಳಿತ ಸಂಪೂರ್ಣವಾಗಿ ಹಳಿ ತಪ್ಪಿದೆ. ಕಾಂಗ್ರೆಸ್ ನಾಯಕರ ಕುಮ್ಮಕ್ಕಿನಿಂದ ನಡೆಯುತ್ತಿರುವ ಆಡಳಿತ ವೈಫಲ್ಯದ ವಿರುದ್ಧ ಬಿಜೆಪಿ ಶೀಘ್ರದಲ್ಲೇ ಬೃಹತ್ ಪ್ರತಿಭಟನೆ ಹಾಗೂ ವಿವಿಧ ಇಲಾಖೆಗಳ ಎದುರು ಸತ್ಯಾಗ್ರಹ ನಡೆಸಲಿದೆ ಎಂದು ಬಿಜೆಪಿ ಕಾರ್ಯಕಾರಿಣಿ ಸದಸ್ಯ ಮಟ್ಟಾರು ರತ್ನಾಕರ ಹೆಗ್ಡೆ ತಿಳಿಸಿದ್ದಾರೆ.
ಶುಕ್ರವಾರ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾರ್ವಜನಿಕರಿಗೆ ರಕ್ಷಣೆ ನೀಡಿ ನ್ಯಾಯ ಒದಗಿಸಬೇಕಾದ ಪೊಲೀಸ್ ಇಲಾಖೆಯ ಉನ್ನತ ಹುದ್ದೆಯಲ್ಲಿರುವ 3 ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವುದು ಸ್ಪಷ್ಟಗೊಂಡು ಅಮಾನತಾಗಿರುವುದು ಜಿಲ್ಲೆಯ ದುಸ್ಥಿತಿಗೆ ಕೈಗನ್ನಡಿಯಾಗಿದೆ. ಭ್ರಷ್ಟಾಚಾರ ಕೇವಲ ಅಧಿಕಾರಿಗಳಿಂದ ಮಾತ್ರ ನಡೆಯುತ್ತಿಲ್ಲ. ಕಾಂಗ್ರೆಸ್ ಪರಾಜಿತ ಅಭ್ಯರ್ಥಿಗಳು ಮತ್ತು ಮುಖಂಡರು ರಾಜ್ಯ ಸರ್ಕಾರದ ಸಚಿವರ ಕುಮ್ಮಕ್ಕಿನಿಂದ ಈ ದಂಧೆಗಳನ್ನು ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.
ಪೊಲೀಸ್ ಇಲಾಖೆ ಮಾತ್ರವಲ್ಲದೆ, ಅಬಕಾರಿ ಇಲಾಖೆ, ಪಿಡಬ್ಲ್ಯೂಡಿ, ನಗರಾಡಳಿತ, ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ಶಿಕ್ಷಣ ಇಲಾಖೆಗಳಲ್ಲಿ ಯಾವುದೇ ಕಡತಗಳು ಮುಂದೆ ಸಾಗುತ್ತಿಲ್ಲ. ಕಾಂಗ್ರೆಸ್ ಮುಖಂಡರ ಶಿಫಾರಸು ಇಲ್ಲದೆ ಯಾವ ಕೆಲಸವೂ ಆಗುತ್ತಿಲ್ಲ ಎಂದರು.
ಪೊಲೀಸ್ ಇಲಾಖೆಯು ಕೇವಲ ಫೇಸ್ಬುಕ್, ಇನ್ಸ್ಟಾಗ್ರಾಮ್ ಖಾತೆಗಳನ್ನು ನೋಡಿಕೊಂಡು ದೇಶ, ಧರ್ಮದ ಬಗ್ಗೆ ಬರೆಯುವವರ ಮೇಲೆ ಕೇಸ್ ಹಾಕುವುದರಲ್ಲಿ ನಿರತವಾಗಿದೆ. ಕೊಲೆ, ದರೋಡೆ, ಸುಲಿಗೆಯಂತಹ ನೈಜ ಅಪರಾಧಗಳನ್ನು ತಡೆಯಲು ಯಾವುದೇ ಕಾರ್ಯಾಚರಣೆ ನಡೆಸುತ್ತಿಲ್ಲ. ಬಿಜೆಪಿ ದೂರು ನೀಡಿದರೆ ಎ್ ಐ ಆರ್ ಆಗುತ್ತಿಲ್ಲ. ಕಾಂಗ್ರೆಸ್ ದೂರಿಗೆ ಶ್ರೀವಾಗಿ ಸ್ಪಂದಿಸುತ್ತಿದ್ದಾರೆ ಎಂದು ಆರೋಪಿಸಿದರು.
ರಾಮಮಂದಿರ ಹುಂಡಿ ಹಣವನ್ನು ಬಿಜೆಪಿ ಅಥವಾ ಸಂ ಪರಿವಾರದ ಕಾರ್ಯಕರ್ತರು ಕದಿಯಲಿಲ್ಲ. ಕೆಲಸಗಾರರಿಂದ ಈ ಕೃತ್ಯ ನಡೆದಿದ್ದು, ಈ ಬಗ್ಗೆ ಕ್ರಮವಹಿಸಲಾಗಿದೆ ಎಂದರು. ವಕ್ತಾರ ದಿವಾಕರ ಶೆಟ್ಟಿ, ನಗರಾಧ್ಯಕ್ಷ ದಿನೇಶ್ ಅಮೀನ್ ಉಪಸ್ಥಿತರಿದ್ದರು.

