ಪ್ರಧಾನಿ ಸ್ವಾಗತಕ್ಕೆ ಸಕಲ ಸಿದ್ಧತೆ

0
132

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಉಡುಪಿಗೆ ಆಗಮಿಸುತ್ತಿದ್ದು, ಜಿಲ್ಲಾಡಳಿತ ಹಾಗೂ ಪರ್ಯಾಯ ಪುತ್ತಿಗೆ ಮಠದಿಂದ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ. ಆದಿಉಡುಪಿ ಹೆಲಿಪ್ಯಾಡ್​ನಿಂದ ಗುರುವಾರ ಬೆಳಗ್ಗೆ ಪ್ರಧಾನಿ ಸಾಗುವ ದಾರಿಯಲ್ಲಿ ಪೊಲೀಸರು ಮಾಕ್​ ಡ್ರಿಲ್​ ನಡೆಸಿದ್ದಾರೆ. ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಹರಿರಾಮ್​ ಶಂಕರ್​, ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಸಹಿತ ಹಿರಿಯ ಅಧಿಕಾರಿಗಳು ಮಾಕ್​ಡ್ರಿಲ್​ ವೀಕ್ಷಣೆ ಮಾಡಿದರು.

ಅಂಗಡಿ ಮುಂಗಟ್ಟುಗಳನ್ನ ಮುಚ್ಚಲು ಆದೇಶ
ಪ್ರಧಾನಿ ನರೇಂದ್ರ ಮೋದಿ ಹಿನ್ನೆಲೆಯಲ್ಲಿ 28ರಂದು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಹೆಲಿಪ್ಯಾಡ್​ ವಠಾರ, ಕೃಷ್ಣಮಠ ವಠಾರ, ಪ್ರವಾಸಿ ಮಂದಿರದ ಸುತ್ತಮುತ್ತ ಹಾಗೂ ಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಅಂಗಡಿ ಮುಂಗಟ್ಟುಗಳನ್ನ ಮುಚ್ಚಲು ಜಿಲ್ಲಾಧಿಕಾರಿ ಟಿ.ಕೆ ಸ್ವರೂಪ್​ ಆದೇಶಿಸಿದ್ದಾರೆ. ಸಾಯಂಕಾಲ 6 ಗಂಟೆಯವರೆಗೆ ನಗರದ 5 ಕಿ.ಮೀ ವ್ಯಾಪ್ತಿಯಲ್ಲಿ ಡ್ರೋನ್​ ಹಾರಾಟ ನಿಷೇಧಿಸಿದ್ದು, ಉಡುಪಿ ನೋ ಫ್ಲೈ ಝೊನ್​ ಎಂದು ಘೋಷಿಸಲಾಗಿದೆ.

ರೋಡ್​ ಶೋ ವೀಕ್ಷಣೆಗೆ ಬರುವವರಿಗೆ ಬ್ಯಾಗ್​, ನೀರಿನ ಬಾಟಲ್​, ಧ್ವಜ ತರುವಂತಿಲ್ಲ. ಫೋಟೋ, ಸ್ಟಿಕರ್ಸ್​, ಬಲೂನ್ಸ್​, ಪಟಾಕಿ, ಲೂಸ್​ ಪಾಲಿಥಿನ್​ ತರುವುದನ್ನ ನಿಷೆೇಧಿಸಲಾಗಿದೆ. ಆದೇಶ ಉಲ್ಲಂಘಿಸುವವರ ವಿರುದದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿಗಳು ಆದೇಶದಲ್ಲಿ ಎಚ್ಚರಿಕೆ ನೀಡಿದ್ದಾರೆ.

LEAVE A REPLY

Please enter your comment!
Please enter your name here