ಉಡುಪಿ: ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವದ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಸುಗಮ ಸಂಚಾರ ವ್ಯವಸ್ಥೆಯನ್ನು ಒದಗಿಸುವ ನಿಟ್ಟಿನಲ್ಲಿ ಜ. 17 ರಂದು ಮಧ್ಯಾಹ್ನ 2 ಗಂಟೆಯಿಂದ 18ರ ಬೆಳಗ್ಗೆ 7 ಗಂಟೆಯವರೆಗೆ ಉಡುಪಿ ನಗರ ವ್ಯಾಪ್ತಿಯಲ್ಲಿ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ, ಬದಲಿ ಮಾರ್ಗ ವ್ಯವಸ್ಥೆ ಕಲ್ಪಿಸಿ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅಧಿಸೂಚನೆ ಹೊರಡಿಸಿದ್ದಾರೆ.
ಮಂಗಳೂರು&ಉಡುಪಿ&ಮಣಿಪಾಲ
ಜ.17ರಂದು ಸಾಯಂಕಾಲ 7 ಗಂಟೆವರೆಗೆ ಮಂಗಳೂರಿನಿಂದ ಉಡುಪಿ, ಮಣಿಪಾಲಕ್ಕೆ ತೆರಳುವ ವಾಹನಗಳು ನೇರವಾಗಿ ರಾ.ಹೆ 66 ರಲ್ಲಿ ಕರಾವಳಿ ಜಂಕ್ಷನ್ ತಲುಪಿ ನಂತರ ಬನ್ನಂಜೆ ಮಾರ್ಗವಾಗಿ ಉಡುಪಿ ಸಿಟಿ ಮತ್ತು ಸರ್ವಿಸ್ ಬಸ್ ನಿಲ್ದಾಣಕ್ಕೆ ಪ್ರವೇಶಿಸಬೇಕು. ನಂತರ ರಾ.ಹೆ.169ಎ ಮೂಲಕ ಮಣಿಪಾಲಕ್ಕೆ ಹೋಗಬಹುದು. ಜ.17ರಂದು ಸಾಯಂಕಾಲ 7 ಗಂಟೆಯಿಂದ ಜ.18 ಬೆಳಗ್ಗೆ 7 ಗಂಟೆಯ ತನಕ ಉಡುಪಿ ನಗರದೊಳಗೆ ಎಲ್ಲಾ ವಾಹನಗಳ ಪ್ರವೇಶವನ್ನು ನಿಷೇಧಿಸಲಾಗಿದೆ. ಈ ಸಂದರ್ಭದಲ್ಲಿ ಕರಾವಳಿ ಜಂಕ್ಷನ್ ಅಂತಿಮ ನಿಲುಗಡೆಯಾಗಿದ್ದು, ಕರಾವಳಿ ಜಂಕ್ಷನ್ನಲ್ಲಿ ಪ್ರಯಾಣಿಕರನ್ನು ಇಳಿಸಿ ಅಲ್ಲಿಂದಲೇ ಪ್ರಯಾಣಿಕರನ್ನು ಕರೆದುಕೊಂಡು ವಾಪಾಸು ಮಂಗಳೂರು ಕಡೆಗೆ ರಾ.ಹೆ 66ರಲ್ಲಿ ಅಂಬಲಪಾಡಿ, ಬಲಾಯಿಪಾದೆ ಮುಖೇನಾ ಹೋಗಬೇಕು. ಮಣಿಪಾಲಕ್ಕೆ ಹೋಗುವ ವಾಹನಗಳು ಕರಾವಳಿ ಜಂಕ್ಷನ್ನಿಂದ ಮುಂದಕ್ಕೆ ಸಾಗಿ ಅಂಬಾಗಿಲು ಮುಖೇನ ಪೆರಂಪಳ್ಳಿ ರಸ್ತೆಯಿಂದಾಗಿ ಕಾಯಿನ್ ಸರ್ಕಲ್, ಸಿಂಡಿಕೇಟ್ ಸರ್ಕಲ್ ಮಾರ್ಗವಾಗಿ ಮಣಿಪಾಲ, ಕಾರ್ಕಳ ಕಡೆಗೆ ಹೋಗಬೇಕು.
ಕುಂದಾಪುರ ಕಡೆಯಿಂದ ಬರುವ ವಾಹನಗಳು
ಜ. 17 ರಂದು ಸಂಜೆ 7 ಗಂಟೆಯ ತನಕ ಕುಂದಾಪುರ- ಬ್ರಹ್ಮಾವರ ಮಾರ್ಗವಾಗಿ ಉಡುಪಿ ನಗರಕ್ಕೆ ಬರುವ ಎಲ್ಲಾ ವಾಹನಗಳು ಅಂಬಾಗಿಲು ಮುಖೇನ ರಾ.ಹೆ 66 ರಲ್ಲಿ ಕರಾವಳಿ ಜಂಕ್ಷನ್ ತಲುಪಿ ಬನ್ನಂಜೆ ಮಾರ್ಗವಾಗಿ ಉಡುಪಿ ಸಿಟಿ, ಸರ್ವಿಸ್ ಬಸ್ ನಿಲ್ದಾಣಕ್ಕೆ ಪ್ರವೇಶಿಸಬೇಕು. ಸಂಜೆ 7 ಗಂಟೆಯಿಂದ ಬೆಳಗ್ಗೆ 7 ಗಂಟೆಯ ತನಕ ಕುಂದಾಪುರದಿಂದ ಉಡುಪಿ ನಗರಕ್ಕೆ ಆಗಮಿಸುವ ಎಲ್ಲಾ ವಾಹನಗಳನ್ನು ಪ್ರವೇಶಿಸುವುದನ್ನು ನಿಷೇಧಿಸಿದೆ. ಕರಾವಳಿ ಜಂಕ್ಷನ್ನಲ್ಲಿ ಪುಯಾಣಿಕರನ್ನು ಇಳಿಸಿ ಅಲ್ಲಿಂದಲೇ ಪ್ರಯಾಣಿಕರನ್ನು ಕರೆದುಕೊಂಡು ವಾಪಾಸು ನಿಟ್ಟೂರು, ಅಂಬಾಗಿಲು, ಸಂತೆಕಟ್ಟೆ, ಮುಖೇನಾ ಕುಂದಾಪುರ ಕಡೆಗೆ ಹೋಗಬೇಕು.
ಕಾರ್ಕಳ-&ಮಣಿಪಾಲ ವಾಹನಗಳು
ಜ.17 ರಂದು ಸಂಜೆ 7 ಗಂಟೆಯ ತನಕ ಕಾರ್ಕಳ, ಮಣಿಪಾಲಕ್ಕೆ ಹೋಗಿ ಬರುವಂತಹ ವಾಹನಗಳು ನೇರವಾಗಿ ರಾ.ಹೆ.ಯಲ್ಲಿ ಕಲ್ಸಂಕ ಮಾರ್ಗವಾಗಿ ಉಡುಪಿ ಸಿಟಿ, ಸರ್ವಿಸ್ ಬಸ್ ನಿಲ್ದಾಣಕ್ಕೆ ಪ್ರವೇಶಿಸಬೇಕು. ಸಂಜೆ 7 ಗಂಟೆಯಿಂದ ಬೆಳಗ್ಗೆ 7 ಗಂಟೆಯ ತನಕ ಮಣಿಪಾಲ ಸಿಂಡಿಕೇಟ್ ಸರ್ಕಲ್ ನಿಂದ ಕಾಯಿನ್ ಸರ್ಕಲ್, ಪೆರಂಪಳ್ಳಿ, ಅಂಬಾಗಿಲು, ನಿಟ್ಟೂರು ಮಾರ್ಗವಾಗಿ ಕರಾವಳಿ ಜಂಕ್ಷನ್ ಅಂತಿಮ ನಿಲುಗಡೆಯಾಗಿದ್ದು, ಅದೇ ಮಾರ್ಗದಲ್ಲಿ ವಾಪಾಸು ಹೋಗಬೇಕು.
ಮಂಗಳೂರು, ಮುಂಬೈ, ಬೆಂಗಳೂರು ವಾಹನಗಳು
ಮಂಗಳೂರಿನಿಂದ ಮುಂಬೈ, ಹುಬ್ಬಳ್ಳಿ ಕಡೆಗೆ ಹೋಗುವ ಎಲ್ಲಾ ಖಾಸಗಿ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ಸುಗಳು ಪ್ರಯಾಣಿಕರನ್ನು ಬಲೈಪಾದೆ ಬಳಿ ಹತ್ತಿಸಿಕೊಂಡು ಹೋಗಬೇಕು. ಬೆಂಗಳೂರು ಕಡೆಗೆ ಹೋಗುವ ಎಲ್ಲಾ ಖಾಸಗಿ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ಸುಗಳು ಪ್ರಯಾಣಿಕರನ್ನು ಮಣಿಪಾಲ ಇನ್ ಬಳಿ ಹತ್ತಿಸಿಕೊಂಡು ಹೋಗಬೇಕು. ಮಂಗಳೂರಿನಿಂದ ಮುಂಬೈ ಕಡೆಗೆ ಮತ್ತು ಬೆಂಗಳೂರಿಗೆ ಹೋಗುವ ಎಲ್ಲಾ ಖಾಸಗಿ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ಸುಗಳು ಬಲೈಪಾದೆ, ಅಂಬಲಪಾಡಿ, ಕರಾವಳಿ ಜಂಕ್ಷನ್, ಬನ್ನಂಜೆ, ಸಿಟಿ ಬಸ್ಸು ನಿಲ್ದಾಣ, ಕೆ.ಎಸ್.ಆರ್.ಟಿ.ಸಿ ಬಸ್ಸು ನಿಲ್ಯಾಣಕ್ಕೆ ಬಂದು ಪ್ರಯಾಣಿಕರನ್ನು ಕರೆದುಕೊಂಡು ಅದೇ ಮಾರ್ಗವಾಗಿ ಪ್ರಯಾಣವನ್ನು ಮುಂದುವರಿಸಬೇಕು. ಸಂಜೆ 7 ಗಂಟೆಯಿಂದ ಮುಂಬೈ, ಬೆಂಗಳೂರಿಗೆ ಹೋಗುವ ಎಲ್ಲಾ ಖಾಸಗಿ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ಸುಗಳು ಕರಾವಳಿ ಜಂಕ್ಷನ್ ಅಂತಿಮಗೊಳಿಸಿ, ಅಲ್ಲಿಯೇ ಎರಡೂ ಬದಿಯ ಸರ್ವಿಸ್ ರಸ್ತೆಯಲ್ಲಿ ಪ್ರಯಾಣಿಕರನ್ನು ಕರೆದುಕೊಂಡು ಮುಂಬೈ, ಬೆಂಗಳೂರಿಗೆ ಪ್ರಯಾಣ ಮುಂದುವರಿಸಬೇಕು.
ಮಲ್ಪೆ ಕಡೆಯಿಂದ ಉಡುಪಿಗೆ ಬರುವ ವಾಹನಗಳು
ಜ. 17 ರಂದು ಸಂಜೆ 6 ಗಂಟೆಯ ತನಕ ಮಲ್ಪೆಯಿಂದ ಬರುವ ಎಲ್ಲಾ ಬಸ್ಸುಗಳು, ಆದಿಉಡುಪಿ, ಕರಾವಳಿ ಜಂಕ್ಷನ್, ಬನ್ನಂಜೆ ಮಾರ್ಗವಾಗಿ ಉಡುಪಿ ನಗರಕ್ಕೆ ಪ್ರವೇಶಿಸಬೇಕು. ಉಡುಪಿ ನಗರಕ್ಕೆ ಸಂಜೆ 7 ಗಂಟೆಯಿಂದ ಬೆಳಗ್ಗೆ 7 ಗಂಟೆಯ ತನಕ ಮಲ್ಪೆ ಕಡೆಯಿಂದ ಬರುವಂತಹ ಎಲ್ಲಾ ವಾಹನಗಳು ಆದಿ ಉಡುಪಿ ಜಂಕ್ಷನ್ ತನಕ ಆಗಮಿಸಿ ನಂತರ ವಾಪಾಸು ಅದೇ ಮಾರ್ಗದಲ್ಲಿ ಮಲ್ಪೆ ಕಡೆಗೆ ಹಿಂತಿರುಗಬೇಕು. ಮಂಗಳೂರು, ಕುಂದಾಪುರ ಕಡೆಗೆ ಹೋಗುವ ವಾಹನಗಳು ಕರಾವಳಿ ಜಂಕ್ಷನ್ ಮುಖೇನ ಹಾದು ಹೋಗಬೇಕು.
ಉಡುಪಿ ನಗರಕ್ಕೆ ಕುಕ್ಕಿಕಟ್ಟೆ, ಮೂಡುಬೆಳ್ಳೆ, ಅಲೆವೂರು, ಕೊರಂಗ್ರಪಾಡಿ, ಬೈಲೂರು ಕಡೆಗಳಿಗೆ ಹೋಗುವ ಮತ್ತು ಬರುವ ವಾಹನಗಳು ಚಿಟ್ಪಾಡಿ, ಬೀಡಿನಗುಡ್ಡೆ, ಶಾರದ ಕಲ್ಯಾಣ ಮಂಟಪ, ಕಲ್ಸಂಕ ಮಾರ್ಗವಾಗಿ ಉಡುಪಿ ಸಿಟಿ, ಸರ್ವಿಸ್ ಬಸ್ ನಿಲ್ದಾಣಕ್ಕೆ ಪ್ರವೇಶಿಸಬೇಕು. 17ರಂದು ಸಂಜೆ 7 ಗಂಟೆಯಿಂದ ಬೀಡಿನಗುಡ್ಡೆ, ಚಿಟ್ಪಾಡಿ ಮುಖಾಂತರ ಮಿಷನ್ ಕಂಪೌಂಡ್ ರಸ್ತೆ ಅಂತಿಮ ನಿಲುಗಡೆಯಾಗಿದೆ. ಅಲ್ಲಿಂದಲೇ ವಾಪಾಸು ಹಿಂತಿರುಗಬೇಕು.
ವಾಹನ ನಿಲುಗಡೆ ನಿಷೇಧ
ಜ. 17 ರಂದು ಮಧ್ಯಾಹ್ನ 2 ಗಂಟೆಯಿಂದ ಜ. 18 ರ ಬೆಳಗ್ಗೆ 7 ಗಂಟೆಯವರೆಗೆ ಎಲ್ಲಾ ಮಾದರಿಯ ವಾಹನಗಳನ್ನು ರಸ್ತೆ ಬದಿಯಲ್ಲಿ ನಿಲುಗಡೆ ಮಾಡುವುದನ್ನು ನಿಷೇಧಿಸಲಾಗಿದೆ.
ಅಂಬಲಪಾಡಿಯಿಂದ ಜೋಡುಕಟ್ಟೆಯವರೆಗೆ ಎರಡೂ ಬದಿ, ಬ್ರಹ್ಮಗಿರಿಯಿಂದ ಬನ್ನಂಜೆವರೆಗೆ. ಲಯನ್ ಸರ್ಕಲ್ನಿಂದ ಮಿಷನ್ ಕಂಪೌಂಡ್ವರೆಗೆ, ಬೇತಲ್ ಚರ್ಚ್ನಿಂದ ಸಿಂಡಿಕೇಟ್ ಸರ್ಕಲ್ವರೆಗೆ, ಸಿಂಡಿಕೇಟ್ ಸರ್ಕಲ್ನಿಂದ ತ್ರಿವೇಣಿ ಜಂಕ್ಷನ್ ತನಕ, ಹನುಮಾನ್ ಜಂಕ್ಷನ್ನಿಂದ ಸಂಸತ ಕಾಲೇಜ್ ಜಂಕ್ಷನ್, ಕನಕದಾಸ ರಸ್ತೆಯಿಂದ ಪಲಿಮಾರು ಮಠದ ಗೇಟ್ ತನಕ. ಸಿಟಿ ಸೆಂಟರ್ನಿಂದ ಚಿತ್ರರಂಜನ್ ಸರ್ಕಲ್, ಮಿತ್ರಾ ಆಸ್ಪತ್ರೆಯ ತನಕ, ಐಡಿಯಲ್ ಜಂಕ್ಷನ್, ಎಲ್.ವಿ.ಟಿ ತೆಂಕಪೇಟೆ ದೇವಸ್ಥಾನ, ಪಿಪಿಸಿ ಕಾಲೇಜ್ ತನಕ, ಐಡಿಯಲ್ ಜಂಕ್ಷನ್ನಿಂದ ಹರಿಶ್ಚಂದ್ರ ಮಾರ್ಗ, ವಿದ್ಯೋದಯ ಶಾಲೆಯವರೆಗೆ, ಕಲ್ಸಂಕದಿಂದ ರಾಜಾಂಗಣ ಪಾರ್ಕಿಂಗ್ ಸ್ಥಳದವರೆಗೆ. ಓಶಿಯನ್ ಪರ್ಲ್ ಹೊಟೇಲ್ನಿಂದ, ಕಟ್ಟೆ ಆಚಾರ್ಯ ಮಾರ್ಗ, ಮಥುರಾ ಹೊಟೇಲ್ ತನಕ, ವುಡ್ ಲ್ಯಾಂಡ್ ಹೋಟೇಲ್ನಿಂದ ಪೇಜಾವರ ಮಠದ ಹಿಂಭಾಗದವರೆಗೆ, ಕೃಷ್ಣ ಮಠದ ರಥಬೀದಿಗಳಲ್ಲಿ ಯಾವುದೇ ವಾಹನ ಪ್ರವೇಶ ಮತ್ತು ನಿಲುಗಡೆ ನಿಷೇಧಿಸಲಾಗಿದೆ.
